ಪದ್ಮನಾಭಸ್ವಾಮಿ ದೇವಳದ ಹಕ್ಕು,ರಹಸ್ಯ ನಿಧಿ ನಿಕ್ಷೇಪದ ಕೋಣೆ ಬಗ್ಗೆ ಸುಪ್ರೀಂ ಆದೇಶದಲ್ಲೇನಿದೆ?
2011ರಲ್ಲಿಯೇ ಸುಪ್ರೀಂಕೋರ್ಟ್ ನೇಮಕ ಮಾಡಿರುವ ಸಮಿತಿಯೇ ಆಂತರಿಕವಾಗಿ ಕಾರ್ಯನಿರ್ವಹಿಸಲಿದೆ.
Team Udayavani, Jul 13, 2020, 2:52 PM IST
ನವದೆಹಲಿ:ಕೇರಳ ಪದ್ಮನಾಭಸ್ವಾಮಿ ದೇವಸ್ಥಾನದ ಆಡಳಿತವನ್ನು ನಡೆಸುವ ರಾಜಮನೆತನಗಳ ಹಕ್ಕನ್ನು ಸುಪ್ರೀಂಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಅಲ್ಲದೇ ತಿರುವನಂತಪುರಂನಲ್ಲಿರುವ ಐತಿಹಾಸಿಕ ದೇವಾಲಯದ ಮೇಲೆ ರಾಜ್ಯ ಸರ್ಕಾರ ಅಧಿಕಾರದ ಹಿಡಿತ ಸಾಧಿಸಬೇಕು ಎಂಬ 2011ರ ಕೇರಳ ಹೈಕೋರ್ಟ್ ನಿರ್ದೇಶನವನ್ನು ತಳ್ಳಿಹಾಕಿದೆ.
ರಾಜಮನೆತನ ಆಡಳಿತ ಮಂಡಳಿಯನ್ನು ಅಂತಿಮವಾಗಿ ರಚಿಸುವವರೆಗೂ ಪದ್ಮನಾಭಸ್ವಾಮಿ ದೇವಸ್ಥಾನದ ಆಡಳಿತ ನಿರ್ವಹಣೆಯನ್ನು ತಿರುವನಂತಪುರಂ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ನೋಡಿಕೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ನ ಜಸ್ಟೀಸ್ ಯು,ಯು.ಲಲಿತ್ ಮತ್ತು ಇಂದು ಮಲೋತ್ರಾ ನೇತೃತ್ವದ ಪೀಠ ತಿಳಿಸಿದೆ.
2011ರಲ್ಲಿಯೇ ಸುಪ್ರೀಂಕೋರ್ಟ್ ನೇಮಕ ಮಾಡಿರುವ ಸಮಿತಿಯೇ ಆಂತರಿಕವಾಗಿ ಕಾರ್ಯನಿರ್ವಹಿಸಲಿದೆ. ರಾಜಮನೆತನ ಸಮಿತಿಯನ್ನು ಅಂತಿಮಗೊಳಿಸಿ ರಚಿಸಲಿದೆ.
ಪದ್ಮನಾಭ ಸ್ವಾಮಿ ದೇವಸ್ಥಾನದ ರಹಸ್ಯ ನಿಧಿ ನಿಕ್ಷೇಪ ಇದೆ ಎಂದು ನಂಬಿರುವ ನೆಲಮಾಳಿಗೆಯ ಪ್ರಮುಖ ಕೋಣೆಯ ಬಾಗಿಲನ್ನು ತೆರೆಯಬೇಕೆ ಅಥವಾ ಬೇಡವೇ ಎಂಬ ಬಗ್ಗೆ ರಾಜಮನೆತನದ ಸಂಪ್ರದಾಯದ ಪ್ರಕಾರ ಅಂತಿಮ ಸಮಿತಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಹಾಗಂತ ಇದು ರಾಜಮನೆತನಕ್ಕೆ ಕಾನೂನು ಹೋರಾಟದಲ್ಲಿ ದೊರೆತ ಜಯ ಎಂಬುದಾಗಿ ಪರಿಗಣಿಸಬಾರದು. ಯಾಕೆಂದರೆ ಪದ್ಮನಾಭ ಸ್ವಾಮಿಯ ಎಲ್ಲಾ ಭಕ್ತರ ಆಶೀರ್ವಾದ ಎಂದು ನಾವು ಗ್ರಹಿಸಿದ್ದೇವೆ. ಈ ತೀರ್ಪನ್ನು ಕೇರಳ ಸರ್ಕಾರ ಕೂಡಾ ಸ್ವಾಗತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ