ನಿರ್ಭಯಾ ಅತ್ಯಾಚಾರಿಗಳಿಗೆ ಮಾ. 3ಕ್ಕೂ ಗಲ್ಲು ಅಸಾಧ್ಯ
Team Udayavani, Feb 26, 2020, 1:16 AM IST
ಹೊಸದಿಲ್ಲಿ: ನಿರ್ಭಯಾ ಪ್ರಕರಣದ ನಾಲ್ವರು ಅತ್ಯಾಚಾರಿಗಳಿಗೆ ಮಾ. 3ರಂದು ಗಲ್ಲು ಶಿಕ್ಷೆ ಜಾರಿ ಅಸಾಧ್ಯವಾಗಿದೆ. ವಿಚಾರಣಾ ನ್ಯಾಯಾಲಯವು, ಫೆ. 17ರಂದು ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲು ಮಾ. 3ರಂದು ಬೆಳಗ್ಗೆ 6 ಗಂಟೆಗೆ ಸಮಯವನ್ನು ನಿಗದಿಪಡಿಸಿತ್ತು.
ದೋಷಿಗಳನ್ನು ಪ್ರತ್ಯೇಕವಾಗಿ ಗಲ್ಲುಶಿಕ್ಷೆ ವಿಧಿಸಲು ಸಾಧ್ಯ ವಿಲ್ಲ, ಎಲ್ಲ ನಾಲ್ವರನ್ನೂ ಒಟ್ಟಿಗೇ ನೇಣುಗಂಬಕ್ಕೇರಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ, ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮಂಗಳವಾರ ಸುಪ್ರೀಂ ಕೋರ್ಟ್ ಈ ಮೇಲ್ಮನವಿಯ ವಿಚಾರಣೆಯನ್ನು ಮಾ. 5ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಹೀಗಾಗಿ, ಅಪರಾಧಿಗಳು ಮಾ. 3ರಂದು ಗಲ್ಲಿಗೇರುವುದು ಕೂಡ ಅನುಮಾನ ಎಂಬಂತಾಗಿದೆ. ಅಪರಾಧಿಗಳ ಪೈಕಿ ಅಕ್ಷಯ್ಗೆ ಕ್ಷಮಾದಾನ ನಿರಾಕರಿಸಲಾಗಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂ ಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಜತೆಗೆ ಪವನ್ ಎಂಬಾತನಿಗೂ ಕ್ಯುರೇಜಿವ್ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್