ತಮಿಳುನಾಡು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಮುಂದುವರಿದ ಮಳೆ: 23 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ; ಮಾಸಾಂತ್ಯದವರೆಗೂ ಮಳೆಗಿಲ್ಲ ಬಿಡುವು
Team Udayavani, Nov 28, 2021, 5:50 AM IST
ಚೆನ್ನೈ:ತಮಿಳುನಾಡು ಮತ್ತೆ “ಮಳೆ’ನಾಡಾಗಿ ಪರಿವರ್ತನೆಗೊಂಡಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಎರಡು ದಿನಗಳಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವೆಂಬಂತೆ, ತಿರುವಳ್ಳುವರ್, ಕಂಚೀಪುರಂ, ಚೆಂಗಲ್ಪಟ್ಟು, ತಿರುನಲ್ವೇಲಿ, ರಾಮನಾಥಪುರಂ, ನಾಗಪಟ್ಟಿಣಂ ಸೇರಿದಂತೆ ಹಲವೆಡೆ ನಿರಂತರ ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. 23 ಜಿಲ್ಲೆಗಳಲ್ಲಿ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶನಿವಾರ 220 ಪ್ರದೇಶಗಳು ಜಲಾವೃತಗೊಂಡಿದ್ದು, ನಗರದ 127 ಪ್ರದೇಶಗಳಲ್ಲಿ ಪಂಪ್ಗ್ಳ ಮೂಲಕ ಪ್ರವಾಹದ ನೀರನ್ನು ಹೊರಬಿಡುವ ಕೆಲಸ ನಡೆಯುತ್ತಿದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ಹೇಳಿದ್ದಾರೆ.
ಇದನ್ನೂ ಓದಿ:ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ
ಮೀನುಗಾರರಿಗೆ ಸೂಚನೆ:
ತಮಿಳುನಾಡಿನ ದಕ್ಷಿಣ ಕರಾವಳಿ, ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಕಾರಣ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಧಾರಾಕಾರ ಮಳೆಯಿಂದಾಗಿ ವ್ಯಾಪಕ ಪ್ರಮಾಣದ ಬೆಳೆಹಾನಿಯಾಗಿದ್ದು, ನೂರಾರು ಮರಗಳು ಧರೆಗುರುಳಿವೆ. ಮಳೆಯಿಂದಾಗಿ ಚೆನ್ನೈನ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ತ.ನಾಡು ಮಾತ್ರವಲ್ಲದೇ ರಾಯಲಸೀಮಾ ಪ್ರದೇಶ, ಯಾನಮ್ ಸೇರಿದಂತೆ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲೂ ನ.27 ಮತ್ತು 28ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ, ನ.29ರಂದು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಹೊಸದಾಗಿ ವಾಯುಭಾರ ಕುಸಿತ ಉಂಟಾಗಲಿದ್ದು, ನಂತರದ 48 ಗಂಟೆಗಳ ಕಾಲ ಅದು ಪಶ್ಚಿಮ-ವಾಯವ್ಯದಿಕ್ಕಿನತ್ತ ಸಂಚರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ