ಲೋಕಸಭಾ ಚುನಾವಣೆ 2019: ವಿದೇಶದಿಂದ ಬಂದು ಮತ ಹಾಕಿದವರು 25 ಸಾವಿರ ಮಂದಿ ಮಾತ್ರ


Team Udayavani, Oct 20, 2019, 9:48 PM IST

Election-Commission-of-India-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ವಿದೇಶದಲ್ಲಿರುವ ಅನಿವಾಸಿ ಭಾರತೀಯರ ಪೈಕಿ ಕೆಲವರು ತಮ್ಮ ಹಕ್ಕನ್ನು ಚಲಾಯಿಸಲು ಭಾರತಕ್ಕೆ ಬಂದು ಮತ ಚಲಾಯಿಸಿದ್ದಾರೆ. ಅಂಕಿ ಅಂಶಗಳ ಪ್ರಕಾರ ಭಾರತದಿಂದ ಹೊರ ಹೋಗಿ ಉದ್ಯೋಗ ಮತ್ತು ಇತರ ಕಾರಣಗಳಿಗೋಸ್ಕರ ಸುಮಾರು ಒಂದು ಲಕ್ಷ ಮಂದಿ ವಿದೇಶದಲ್ಲಿ ನೆಲೆಸಿದ್ದು, ಇನ್ನೂ ತಮ್ಮ ಪೌರತ್ವವನ್ನು ಇಲ್ಲಿಯೇ ಉಳಿಸಿಕೊಂಡಿದ್ದಾರೆ. ಇದರ ಪ್ರಕಾರ ಚುನಾವಣೆಗಳಲ್ಲಿ ಅವರು ಮತದಾನ ಮಾಡಬಹುದಾಗಿದೆ. ಆದರೆ ಅವರ ಪೈಕಿ ಕೇವಲ 25,000 ಮಂದಿ ಮಾತ್ರ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.

ಈ ಸಂಬಂಧ ಮಾಹಿತಿಯನ್ನು ಬಿಡುಗಡೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ 1 ಲಕ್ಷ ಮಂದಿಯಲ್ಲಿ 91,850 ಪುರುಷರು, 7,943 ಮಹಿಳೆಯರು ಮತ್ತು 14 ತೃತೀಯ ಲಿಂಗಿಗಳು ವಿದೇಶಗಳಲ್ಲಿ ನೆಲೆಸಿದ್ದಾರೆ. ಇವರ ಪೈಕಿ 25,606 ಮಂದಿ 2019ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ. ಮತದಾನ ಮಾಡಿದವರಲ್ಲಿ 24,458 ಪುರುಷರು ಹಾಗೂ 1,148 ಮಂದಿ ಮಹಿಳೆಯರು ಸೇರಿದ್ದಾರೆ.

ನೆರೆಯ ಕೇರಳ ರಾಜ್ಯದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಗಳಲ್ಲಿ ಜನ ನೆಲೆಸಿದ್ದಾರೆ. ಇವರಲ್ಲಿ ಅನೇಕರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಅಂಕಿ ಅಂಶಗಳ ಪ್ರಕಾರ 85,161 ಮಂದಿ ಮಲಯಾಳಿಗಳು ವಿದೇಶಗಳಲ್ಲಿ ನೆಲೆಸಿದ್ದು, ಅವರ ಪೈಕಿ 25, 091 ಮಂದಿ ಮತದಾನ ಮಾಡಿದ್ದಾರೆ.

ದಿಲ್ಲಿಯಲ್ಲಿ 336 ಮಂದಿ ವಿದೇಶದಲ್ಲಿದ್ದಾರೆ. ಅವರಲ್ಲಿ 231 ಪುರುಷರು ಹಾಗೂ 105 ಮಹಿಳೆರು ಸೇರಿದ್ದಾರೆ. ಆದರೆ ಇವರ್ಯಾರೂ ಮತದಾನಕ್ಕೆ ಆಗಮಿಸಿಲ್ಲ. ಇದೇ ಬೆಳವಣಿಗೆ ಪುದುಚೇರಿಯಲ್ಲೂ ನಡೆದಿದ್ದು, ಅಲ್ಲಿನ 272 ಮತಗಳ ಪೈಕಿ ಯಾರೂ ಮತದಾನ ಮಾಡಿಲ್ಲ. ಪಶ್ಚಿಮ ಬಂಗಾಳದ 34 ಮಂದಿಯೂ ಮತದಾನದಿಂದ ದೂರ ಉಳಿದಿದ್ದಾರೆ.

3.10 ಕೋಟಿ
ಭಾರತೀಯ ವಿದೇಶಾಂಗ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಸುಮಾರು 3.10 ಕೋಟಿ ಮಂದಿ ಎನ್‌.ಆರ್‌.ಐ.ಗಳಾಗಿ ವಿದೇಶಗಳಲ್ಲಿ ವಾಸವಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.