ಮೋದಿಗೆ ಲಘು ಪ್ರಶ್ನೆ OK, ನನಗೆ ಕಠಿನ ಪ್ರಶ್ನೆ ಯಾಕೆ ? ಮಾಧ್ಯಮಕ್ಕೆ ರಾಹುಲ್ ತರಾಟೆ
Team Udayavani, May 17, 2019, 7:28 PM IST
ಹೊಸದಿಲ್ಲಿ : ”ನನಗೆ ನೀವು ಕಠಿನ ಪ್ರಶ್ನೆಗಳನ್ನು ಕೇಳುತ್ತೀರಿ; ಆದರೆ ಪ್ರಧಾನಿ ನರೇಂದ್ರ ಮೋದಿ ಗೆ ‘ನಿಮಗೆ ಮಾವಿನ ಹಣ್ಣು ಇಷ್ಟವಾ?’ ಎಂಬ ರೀತಿಯ ಲಘು ಪ್ರಶ್ನೆಗಳನ್ನು ಕೇಳುತ್ತೀರಿ – ಏಕೆ” ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದು ಮಾಧ್ಯಮದವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಅನಂತರ ಪ್ರಧಾನಿ ಮೋದಿ ವಿರುದ್ಧ ವಾಕ್ಸಮರ ಆರಂಭಿಸಿದ ರಾಹುಲ್, “ಕೊನೆಗೂ ನೀವು (ಮೋದಿ) ರಫೇಲ್ ಫೈಟರ್ ಜೆಟ್ ಡೀಲ್ ಬಗ್ಗೆ ಬಹಿರಂಗ ಚರ್ಚೆಯ ನನ್ನ ಆಹ್ವಾನವನ್ನು ಸ್ವೀಕರಿಸಲೇ ಇಲ್ಲ” ಎಂದು ಜರೆದರು.
2019ರ ಲೋಕಸಭಾ ಚುನಾವಣೆಯ ಮೇ 19ರ 7ನೇ ಹಾಗೂ ಕೊನೇ ಹಂತದ ಚುನಾವಣೆಯ ಅಂತಿಮ ದಿನದ ಪ್ರಚಾರ ಕೊನೆಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, “ಪ್ರಧಾನಿ ಮೋದಿ ಅವರು ರಫೇಲ್ ಕುರಿತ ಬಹಿರಂಗ ಚರ್ಚೆಯ ಚ್ಯಾಲೆಂಜನ್ನು ಏಕೆ ಸ್ವೀಕರಿಸಲಿಲ್ಲ’ ಎಂದು ಪ್ರಶ್ನಿಸಿದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜತೆಗೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡ ಪ್ರಧಾನಿಯದ್ದು ‘ಅಭೂತಪೂರ್ವ’ ಕ್ರಮ ಎಂದು ರಾಹುಲ್ ಟೀಕಿಸಿದರು.
ಬಿಡುವಿಲ್ಲದ ಚುನಾವಣಾ ಪ್ರಚಾರಾಭಿಯಾನದಲ್ಲಿ ಅವಿರತವಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಧನ್ಯವಾದ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ