ಮೊದಲ ಬಾರಿಗೆ ಹಿಂದೂ ಸಂಪ್ರದಾಯ ಮೂಲಕ ದಾಂಪತ್ಯ ಜೀವನಕ್ಕೆ ಗೇ ಕಪಲ್ಸ್!
ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾದ ಪುರುಷರು
Team Udayavani, Jul 6, 2022, 12:03 PM IST
ಕೊಲ್ಕತ್ತಾ: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಯುವಕ-ಯುವತಿ ಸಂಪ್ರದಾಯ ಬದ್ದವಾಗಿ ಮದುವೆಯಾಗುವುದು ಸಾಮಾನ್ಯ. ಆದರೆ ಕೊಲ್ಕತ್ತಾದಲ್ಲಿ ನಡೆದ ಮದುವೆಯೊಂದು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಕಾರಣ ಸಲಿಂಗಕಾಮಿ ಜೋಡಿ ಮದುವೆ.
ಕೋಲ್ಕತ್ತಾದ ಸಲಿಂಗಕಾಮಿ ದಂಪತಿಗಳಾದ ಚೈತನ್ ಶರ್ಮಾ ಮತ್ತು ಅಭಿಷೇಕ್ ರೇ ಅವರು ಜುಲೈ 3 ರಂದು ಹಿಂದೂ ಸಾಂಪ್ರದಾಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಅದ್ದೂರಿ ಮದುವೆಯಲ್ಲಿ ಅವರ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದು, ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣ ವೈರಲ್ ಆಗಿವೆ.
ಕೋಲ್ಕತ್ತಾದ ಮೂಲದ ನಿವಾಸಿ ಅಭಿಷೇಕ್ ರೇ ವೃತ್ತಿಯಲ್ಲಿ ಫ್ಯಾಶನ್ ಡಿಸೈನರ್ ಆಗಿದ್ದು, ಗುರ್ಗಾಂವ್ ಮೂಲದ ಚೈತನ್ ಶರ್ಮಾ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪುರೋಹಿತರು ಮಂತ್ರ ಹೇಳಿ ದಂಪತಿಗಳು ಪರಸ್ಪರ ಹಾರ ಹಾಕಿಕೊಂಡರು. ಇದರೊಂದಿಗೆ, ದಂಪತಿಗಳು ಪವಿತ್ರ ಅಗ್ನಿಯ ಮುಂದೆ ಏಳು ಹೆಜ್ಜೆ ಪ್ರದಕ್ಷಿಣೆಯನ್ನು ಮಾಡಿದರು. ಕೋಲ್ಕತ್ತಾ ನಗರದಲ್ಲಿ ಸಲಿಂಗ ವಿವಾಹಗಳು ನಡೆಯುತ್ತಿರುವುದು ಇದೇ ಮೊದಲಲ್ಲವಾದರೂ, ಮದುವೆಯಲ್ಲಿ ಹಿಂದೂ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಇದೇ ಮೊದಲು.
ಇದನ್ನೂ ಓದಿ: ಚಂದ್ರಶೇಖರ್ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು!
ಸುದ್ದಿಗಾರರೊಂದಿಗೆ ಮಾತನಾಡಿದ ಚೈತನ್, “ಕಳೆದ ವರ್ಷ ಡಿಸೆಂಬರ್ನಲ್ಲಿ ಮದುವೆಯಾಗಲು ನಿರ್ಧರಿಸಲಾಗಿತ್ತು ಆದರೆ ಕೋವಿಡ್ -19 ಪರಿಸ್ಥಿತಿಯಿಂದಾಗಿ ನಮ್ಮ ಕುಟುಂಬಸ್ಥರು ಬರಲು ಸಾಧ್ಯವಾಗಲಿಲ್ಲ. ಆದ್ದರಿಂದ ಮದುವೆಯನ್ನು ಜುಲೈಗೆ ಮುಂದೂಡಲಾಗಿತ್ತು. ಅಭಿಷೇಕ್ ನನ್ನ ಪತಿ, ಜೀವನ ಸಂಗಾತಿ ಮತ್ತು ಉತ್ತಮ ಸ್ನೇಹಿತ. ಈತ ನನ್ನ ಪತಿಯಾಗಿರುವುದಕ್ಕೆ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ” ಎಂದು ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ