ದಿಲ್ಲಿಯಲ್ಲಿ ಭಾರೀ ಮಳೆ, ಟ್ರಾಫಿಕ್ ಜಾಮ್, ರಸ್ತೆ ತುಂಬ ನೀರು
Team Udayavani, Aug 28, 2018, 4:20 PM IST
ಹೊಸದಿಲ್ಲಿ : ಇಂದು ಮಂಗಳವಾರ ನಸುಕಿನ ವೇಳೆ ದಿಲ್ಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆಯಾದ ಕಾರಣ ತಗ್ಗು ಪ್ರದೇಶಗಳೆಲ್ಲ ನೀರು ತುಂಬಿ ಕೊಂಡು ಜನಜೀವನ, ವಾಹನ ಸಂಚಾರ ತೀವ್ರವಾಗಿ ಬಾಧಿತವಾಯಿತು.
ಇಂದಿರಾಗಾಂಧಿ ವಿಮಾನ ನಿಲ್ದಾಣ, ತೀನ್ ಮೂರ್ತಿ ಭವನ್ ಮತ್ತು ಆರ್ ಕೆ ಪುರಂ ಪ್ರದೇಶಗಳಲ್ಲಿ ಭಾರಿ ಮಳೆಯೊಂದಿಗೆ ಗುಡುಗು ಸಿಡಿಲು ಕೂಡ ಕಂಡುಬಂತು. ಗುರುಗ್ರಾಮ ಪ್ರದೇಶದಲ್ಲಿನ ಕೆಲವು ಶಾಲೆಗಳು ವಿದ್ಯಾರ್ಥಿಗಳಿಗೆ ರಜೆ ನೀಡಿದವು. ದ್ವಾರಕಾ ಪ್ರದೇಶದಲ್ಲಿನ ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು.
ಸೋಮವಾರದ ಈ ತನಕ ದಿಲ್ಲಿಯಲ್ಲಿ 49.6 ಎಂಎಂ ಮಳೆ ಸುರಿದಿರುವುದು ದಾಖಲಾಗಿದೆ.
ಕನಾಟ್ ಪ್ಲೇಸ್ನಲ್ಲಿ ಬೆಳಗ್ಗೆ 7.30ರ ಹೊತ್ತಿಗೆ ಬಸ್ ಸ್ಟಾಪ್ ಸೂರಿನ ಮೇಲೆ ಮರ ಉರುಳಿ ಬಿದ್ದಿದೆ. ಹಲವು ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿರುವುದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ