ಟ್ರಕ್ ಚಾಲಕನ ಕ್ರೌರ್ಯ: ಸಂಚಾರಿ ಪೊಲೀಸ್ ಅಧಿಕಾರಿ ಸಾವು
Team Udayavani, Jan 25, 2023, 4:48 PM IST
ಕಪುರ್ತಲಾ: ಪಂಜಾಬ್ನಲ್ಲೊಂದು ಭೀಕರ ದುರ್ಘಟನೆ ನಡೆದಿದೆ. ಟ್ರಕ್ ಚಾಲಕನೊಬ್ಬನ ಕ್ರೌರ್ಯಕ್ಕೆ ಸಿಲುಕಿದ ಸಂಚಾರಿ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ಸಾವಿಗೀಡಾಗಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಮಲ್ಕಿಯತ್ ಸಿಂಗ್ ಮಂಗಳವಾರ ಇಲ್ಲಿನ ಡಿಸಿ ಚೌಕ್ನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಅದೇ ವೇಳೆ ಆ ಮಾರ್ಗದಲ್ಲಿ ಬರುತ್ತಿದ್ದ ಸಣ್ಣ ಟ್ರಕ್ವೊಂದಕ್ಕೆ ತಪಾಸಣಾ ದೃಷ್ಟಿಯಿಂದ ನಿಲ್ಲಿಸಲು ಸಂಕೇತ ಮಾಡಿದರು. ಅದನ್ನು ಕಡೆಗಣಿಸಿದ ಚಾಲಕ ನೇರವಾಗಿ ಟ್ರಕ್ ಅನ್ನು ಅಧಿಕಾರಿಯ ಮೇಲೆಯೇ ಹಾಯಿಸಿದ್ದಾರೆ.
ಈ ವೇಳೆ ಅಧಿಕಾರಿಯ ವಸ್ತ್ರ ಟ್ರಕ್ಗೆ ಸಿಕ್ಕಿಕೊಂಡಿದೆ. ಅಧಿಕಾರಿಯನ್ನು ಟ್ರಕ್ ಸ್ವಲ್ಪ ದೂರ ಎಳೆದೊಯ್ದಿದೆ. ವಿಪರೀತ ಗಾಯಗೊಂಡ ಮಲ್ಕಿಯತ್ರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಪ್ರಯೋಜನವಾಗಿಲ್ಲ. ಅವರು ಅಲ್ಲೇ ಸಾವನ್ನಪ್ಪಿದ್ದಾರೆ.
ಈ ಭೀಕರ ದುರ್ಘಟನೆಗೆ ಕಾರಣವಾದ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ಇಡೀ ರಾಜ್ಯದಲ್ಲಿ ಆತನನ್ನು ವಶಕ್ಕೆ ಪಡೆಯಲು ಜಾಲ ಬೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ