
ಸತತ ನಾಲ್ಕು ದಿನಗಳ ಕಾರ್ಯಚರಣೆ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕ್ಕಿದ್ದ 8 ವರ್ಷದ ಬಾಲಕ ಕೊನೆಗೂ ಬದುಕಿ ಬರಲಿಲ್ಲ..
ನನ್ನ ಮಗನನ್ನು ಉಳಿಸಿಕೊಡಿ...
Team Udayavani, Dec 10, 2022, 8:52 AM IST

ಮಧ್ಯ ಪ್ರದೇಶ: ಗದ್ದೆಯಲ್ಲಿ ಆಡುವಾಗ 400 ಅಡಿ ಅಳದ ಕೊಳವೆ ಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ ತನ್ಮಯ್ ಸಾಹು ಕೊನೆಗೂ ಬದುಕಿ ಬರಲಿಲ್ಲ. ಶನಿವಾರ (ಡಿ.10 ರಂದು) ರಕ್ಷಣಾ ಸಿಬ್ಬಂದಿಗಳು ತನ್ಮಯ್ ನನ್ನು ಹೊರ ತೆಗೆದಿದ್ದಾರೆ.
ಡಿ.6 ರಂದು ಮಧ್ಯ ಪ್ರದೇಶದ ಬೆತುಲ್ ಜಿಲ್ಲೆ ಮಾಂಡವಿ ಗ್ರಾಮದಲ್ಲಿ ಗದ್ದೆ ಬದಿ ಆಡುತ್ತಿದ್ದ ತನ್ಮಯ್ ಸಾಹು 400 ಅಡಿ ಆಳ ಕೊಳವೆ ಬಾವಿಗೆ ಬಿದ್ದು, 55 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ರಕ್ಷಣಾ ಕಾರ್ಯಚರಣೆ ಆರಂಭಿಸಲಾಗಿತ್ತು.
55 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ ಬಾಲಕನನ್ನು ಶನಿವಾರ ಹೊರಕ್ಕೆ ತೆಗೆಯಲಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಆದಾಗಲೇ ಮಗು ಉಸಿರು ಚೆಲ್ಲಿದೆ ಎಂದಿದ್ದಾರೆ. ಸತತ 4 ದಿನ ಗಳ ಕಾಲ ಕಾರ್ಯಚರಣೆ ನಡೆಸಿದರೂ ಬಾಲಕ ಬದುಕಿ ಬರಲಿಲ್ಲ.
ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ಮಗನನ್ನು ಉಳಿಸಿಕೊಡಿ ಎಂದು ಆಳುತ್ತಾ ಅಧಿಕಾರಿಯ ಮುಂದೆ ಕೂತ ತಾಯಿಯ ಸ್ಥಿತಿ ಮನಕಲಕುವಂತಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
