ವಿಡಿಯೋ…: 9 ಗಂಟೆ ತಡವಾಗಿ ಬಂದ ರೈಲನ್ನು ಪ್ರಯಾಣಿಕರು ಬರಮಾಡಿಕೊಂಡದ್ದು ಹೀಗೆ
Team Udayavani, Nov 29, 2022, 12:18 PM IST
ಒಂದಲ್ಲ ಎರಡಲ್ಲ ಬರೋಬ್ಬರಿ ಒಂಬತ್ತು ಗಂಟೆ ವಿಳಂಬವಾಗಿ ಬಂದ ರೈಲಿಗೆ ನಿಲ್ದಾಣದಲ್ಲಿ ಯಾವ ರೀತಿ ಪ್ರತಿಕ್ರಿಯೆ ಸಿಕ್ಕಿದೆ ಎಂಬುದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತುರ್ತು ಕಾರಣದಿಂದ ಪ್ರಯಾಣಿಕರ ರೈಲೊಂದು ಬರೋಬ್ಬರಿ ಒಂಬತ್ತು ಗಂಟೆ ತಡವಾಗಿ ರೈಲು ನಿಲ್ದಾಣಕ್ಕೆ ಆಗಮಿಸಿದೆ ಈ ವೇಳೆ ಅಲ್ಲಿದ್ದ ಪ್ರಯಾಣಿಕರು ಕೋಪಗೊಂಡರೂ ಅದನ್ನು ಇನ್ನೊಂದು ರೀತಿಯಲ್ಲಿ ತೋರಿಸಿಕೊಂಡಿದ್ದಾರೆ ಅದರಂತೆ ರೈಲು ಪ್ಲಾಟ್ ಫಾರಂ ಪ್ರವೇಶಿಸುತ್ತಿದ್ದಂತೆ ಪ್ರಯಾಣಿಕರು ಚಪ್ಪಾಳೆ ತಟ್ಟಿ, ಸಿಳ್ಳೆ ಹೊಡೆದು ಕುಣಿದು ಸಂತೋಷದಿಂದ ಬರಮಾಡಿಕೊಂಡಿದ್ದಾರೆ, ಇದರ ವಿಡಿಯೋ ಹಾರ್ದಿಕ್ ಬೋಂತು ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ತಡವಾಗಿ ಬಂದ ರೈಲಿಗೆ ಪ್ರಯಾಣಿಕರು ಯಾವ ರೀತಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎಂಬ ಬರಹದೊಂದಿಗೆ ವಿಡಿಯೋ ಹಂಚಿಕೊಂಡಿದ್ದು ಭಾರಿ ವೈರಲ್ ಆಗಿದೆ.
ನೂರಾರು ಮಂದಿ ರೈಲ್ವೆ ನಿಲ್ದಾಣದಲ್ಲಿ ರೈಲಿಗಾಗಿ ಕಾದು ನಿಂತಿರುವ ಚಿತ್ರಣ ವಿಡಿಯೋದಲ್ಲಿ ಕಾಣಬಹುದು ಪ್ಲಾಟ್ ಫಾರಂ ಒಂದು ಮೂಲೆಯಲ್ಲಿ ರೈಲಿನ ಹಾರ್ನ್ ಸದ್ದು ಕೇಳಿದೆ ಆದರೆ ರೈಲು ಕಾಣುತ್ತಿಲ್ಲ, ಇತ್ತ ರೈಲ್ವೆ ಅಧಿಕಾರಿಗಳು ರೈಲು ಆಗಮಿಸುವ ಸೂಚನೆ ನೀಡಿದ್ದಾರೆ ಕೊನೆಗೂ ರೈಲಿನ ಬೆಳಕು ಕಾಣುತ್ತಿದ್ದಂತೆ ಪ್ರಯಾಣಿಕರು ಚಪ್ಪಾಳೆ ಬಡಿದು ಅಂತೂ ರೈಲು ಕೊನೆಗೂ ಬಂತಲ್ಲ ಎಂಬ ಸಂಭ್ರಮದಿಂದ ಕುಣಿದು, ರೈಲಿಗೆ ತಲೆಬಾಗಿ ಸ್ವಾಗತಿಸಿದ್ದಾರೆ.
ಈ ವಿಡಿಯೋ ನೋಡಿದ ಕೆಲವರು ಹಾಸ್ಯಾಸ್ಪದವಾಗಿ ಕಾಮೆಂಟ್ ಮಾಡಿದ್ದರೆ, ಇನ್ನೂ ಕೆಲವರು ಭಾರತದಲ್ಲಿ ಇದು ಸಾಮಾನ್ಯ ಎಂದು ಬರೆದುಕೊಂಡಿದ್ದಾರೆ.
Our train got late by 9 hours. This is how people reacted when it arrived. pic.twitter.com/8jteVaA3iX
— Hardik Bonthu (@bonthu_hardik) November 27, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ