ಬರುವ ವರ್ಷಾಂತ್ಯಕ್ಕೆ ಹೆಜ್ಜಾಲದಲ್ಲಿ ರೈಲು ದುರಂತ!


Team Udayavani, Aug 14, 2017, 12:04 PM IST

train-accident.jpg

ನವದೆಹಲಿ: ರಾಜಧಾನಿ ಬೆಂಗಳೂರು ನಗರದ ಹೊರವಲಯದಲ್ಲಿರುವ ಹೆಜ್ಜಾಲ ಗ್ರಾಮಕ್ಕೆ 2018ರ ಡಿಸೆಂಬರ್‌ ವೇಳೆಗೆ ಹೊಸ “ವಿಪತ್ತು’ ಕಾದಿದೆ. ಅಲ್ಲಿ ಸಾಲು ಸಾಲಾಗಿ ರೈಲು ಅಪಘಾತ, ಬೆಂಕಿ ದುರಂತ, ಅವಘಡಗಳು ಸಂಭವಿಸಲಿವೆ. ಇಂಥ ವಿಪತ್ತುಗಳು ಸಂಭವಿಸಿದ ಬೆನ್ನಲ್ಲೇ ಅಲ್ಲಿಗೆ ಬರುವ ರಕ್ಷಣಾ ಸಿಬ್ಬಂದಿ, ಸುರಕ್ಷತಾ ಕಾರ್ಯಕರ್ತರು ತಕ್ಷಣ ಕಾರ್ಯಪ್ರವೃತ್ತರಾಗಿ “ವಿಪತ್ತು ನಿರ್ವಹಣೆ’ ನಡೆಸಲಿದ್ದಾರೆ!

ಇದು ಯಾರೋ ಜ್ಯೋತಿಷಿಯೊಬ್ಬರು ಹೇಳಿದ ಭವಿಷ್ಯವಾಣಿ ಎಂಬುದು ನಿಮ್ಮ ಊಹೆಯಾಗಿದ್ದರೆ ಅದು ತಪ್ಪು. ಏಕೆಂದರೆ ಇದು ರೈಲ್ವೆ ಇಲಾಖೆ ಘೋಷಿಸಿರುವ ಹೊಸ ಯೋಜನೆ. ಹೌದು, ರೈಲುಗಳು ಹಳಿ ತಪ್ಪುವುದು, ನದಿಗೆ ಬೀಳುವುದು, ಬೋಗಿಗಳಿಗೆ ಬೆಂಕಿ ಹೊತ್ತಿಕೊಳ್ಳುವುದು ಸೇರಿದಂತೆ ದೇಶದಾದ್ಯಂತ ನಡೆಯುವ ರೈಲ್ವೆ ವಿಪತ್ತುಗಳನ್ನು ನಿರ್ವಹಿಸಲು ನೆರವಾಗುವಂತೆ ಬೆಂಗಳೂರಿನ ಹೊರವಲಯದ ಹೆಜ್ಜಾಲದಲ್ಲಿ “ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ಸುರಕ್ಷತಾ ಗ್ರಾಮ’ವನ್ನು ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದೆ. ವಿಪತ್ತು ನಿರ್ವಹಣೆ ಸಿಬ್ಬಂದಿಗೆ ಪರಿಹಾರ ಕಾರ್ಯಗಳ ಕುರಿತು ತರಬೇತಿ ನೀಡುವುದು ಸೇರಿದಂತೆ ಜಾಗೃತಿ ಹಾಗೂ ಸುರಕ್ಷತೆಗೆ ಸಂಬಂಧಿಸಿದ ಹಲವು ಕಾರ್ಯಾಗಾರಗಳಿಗೆ ಈ ಕೃತಕ ಗ್ರಾಮ ವೇದಿಕೆಯಾಗಲಿದೆ.

44.42 ಕೋಟಿ ರೂ. ವೆಚ್ಚ
“ಸುಮಾರು 3,483 ಜನಸಂಖ್ಯೆ ಹೊಂದಿರುವ ಹೆಜ್ಜಾಲ ಗ್ರಾಮದ 3.32 ಚದರ ಕಿ.ಮೀ ವ್ಯಾಪ್ತಿಯಲ್ಲಿ ಉದ್ದೇಶಿತ “ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ಸುರಕ್ಷತಾ ಗ್ರಾಮ’ ಅಭಿವೃದ್ಧಿಪರಿಸಲು 44.42 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪುಗೊಂಡಿದೆ. ಇಲ್ಲಿ ಕೃತಕ ರೈಲ್ವೆ ದುರಂತಗಳನ್ನು ಸೃಷ್ಟಿಸಿ, ಆ ಸಂದರ್ಭದಲ್ಲಿ ಕೈಗೊಳ್ಳುವ ಪರಿಹಾರ ಕಾರ್ಯಾಚರಣೆಯ ಅಣಕು ಪ್ರದರ್ಶನ ನಡೆಯಲಿದೆ. ಭವಿಷ್ಯದಲ್ಲಿ ಈ ರೀತಿಯ ಪರಿಹಾರ ಕಾರ್ಯಗಳ ವೇಗ ಹೆಚ್ಚಿಸುವುದು ಮತ್ತು ಸುಧಾರಣೆ ತರುವ ಉದ್ದೇಶದಿಂದ ಈ ಯೋಜನೆ ರೂಪಿಸಿದ್ದು, ಅಣಕು ಪ್ರದರ್ಶನಕ್ಕೆ ಪ್ರಸ್ತುತ ಬಳಕೆಯಲ್ಲಿಲ್ಲದ ಹಳೆಯ ಬೋಗಿಗಳನ್ನು ಬಳಸಲಾಗುತ್ತದೆ,’ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತರಗತಿಗಳಲ್ಲಿ ಪಠ್ಯ ಬೋಧನೆ ಜೊತೆಗೆ ರೈಲು ಅವಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಸೃಷ್ಟಿಯಾಗುವಂತಹ ನೈಜ ವಾತಾವರಣವನ್ನು ಸೃಷ್ಟಿಸಿ, ವಿವಿಧ ಪರಿಸ್ಥಿತಿ, ಸಂದರ್ಭ ಹಾಗೂ ಹಲವು ಹಂತಗಳಲ್ಲಿ ಸಿಬ್ಬಂದಿಗೆ ಪ್ರಾಯೋಗಿಕ ತರಬೇತಿ ನೀಡುವ ನಿಟ್ಟಿನಲ್ಲಿ ಅನುಕೂಲವಾಗುವಂತೆ ವಿಪತ್ತು ನಿರ್ವಹಣೆ ಗ್ರಾಮವನ್ನು ಅಭಿವೃದ್ಧಿಪಡಿಸಲಾಗುತ್ತದೆ. ವಿಪತ್ತು ಸಂದರ್ಭಗಳ್ಲಲಿ ತಕ್ಷಣದ ರಕ್ಷಣಾ ಕಾರ್ಯಾಚರಣೆ, ವೈದ್ಯಕೀಯ ಪರಿಹಾರ ಮತ್ತು ಬೋಗಿಗಳ ಮರುನಿರ್ಮಾಣ ತಂತ್ರಗಳನ್ನು ಹೇಳಿಕೊಡಲು ಕೃತಕ ಬೋಧನಾ ವಿಧಾನಗಳನ್ನು ಅನುಸರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಸುರಕ್ಷತಾ ಗ್ರಾಮದಲ್ಲಿ ಏನಿರಲಿದೆ
ಸುರಂಗ, ತಡೆಗೋಡೆಗಳು, ಕಂಬಿ ಕತ್ತರಿಸುವಿಕೆ ಸೇರಿದಂತೆ ಇತರ ಸನ್ನಿವೇಶಗಳು, ರಕ್ಷಣಾ ಕಾರ್ಯಾಚರಣೆಗೆ ನೆರವಾಗುವಂತೆ ರೈಲ್ವೆ ಪ್ಲಾಟ್‌ಫಾರಂಗಳನ್ನು ಸೃಷ್ಟಿಸಲಾಗುತ್ತದೆ. ಒಂದೊಮ್ಮೆ ರೈಲು ನದಿಗೆ ಅಥವಾ ನೀರಿಗೆ ಬಿದ್ದಸಂದರ್ಭದಲ್ಲಿ ಪರಿಹಾರ ಕಾರ್ಯಾಚರಣೆಯ ಅಣಕು ಪ್ರದರ್ಶನ ನೀಡಲು ಅನುಕೂಲವಾಗುವಂಥೆ ನೀರಿನ ಕೊಳ ನಿರ್ಮಿಸಲಾಗುತ್ತದೆ. ಹಾಗೇ ರೈಲು ಅಪಘಾತಗಳ ವಿಶ್ಲೇಷಣೆಗೆ ವರ್ಚುವಲ್‌ ರಿಯಾಲಿಟಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.