ಈಜು ಕೊಳಕ್ಕೆ ಬಿದ್ದ ಮಹಿಳೆಯ ರಕ್ಷಣೆಗೆ ಹೋದ IFS ಅಧಿಕಾರಿಯ ಸಾವು


Team Udayavani, May 30, 2017, 12:23 PM IST

Dahia Death-700.jpg

ಹೊಸದಿಲ್ಲಿ : ಈಜು ಕೊಳಕ್ಕೆ ಬಿದ್ದ ತನ್ನ ಮಹಿಳಾ ಸಹೋದ್ಯೋಗಿಯನ್ನು ರಕ್ಷಿಸಲು ಹೋದ ಭಾರತೀಯ ವಿದೇಶ ಸೇವೆಗಳ (ಐಎಫ್ಎಸ್‌) ತರಬೇತಿ ನಿರತ ಅಧಿಕಾರಿಯೋರ್ವರು ತಾನೇ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಿನ್ನೆ ಸೋಮವಾರ ರಾತ್ರಿ ಇಲ್ಲಿ ನಡೆದಿದೆ. 

ದಕ್ಷಿಣ ದಿಲ್ಲಿಯ ಬೇರ್‌ ಸರಾಯ್‌ ಪ್ರದೇಶದಲ್ಲಿರುವ ಫಾರೀನ್‌ ಸರ್ವಿಸ್‌ ಇನ್‌ಸ್ಟಿಟ್ಯೂಟ್‌ನ ಈಜು ಕೊಳದಲ್ಲಿ 30ರ ಹರೆಯದ ಆಶಿಶ್‌ ದಹಿಯಾ ಅವರ ಮೃತ ದೇಹ ತೇಲುತ್ತಿದ್ದುದನ್ನು ಪೊಲೀಸರು ನಿನ್ನೆ ರಾತ್ರಿ ಕಂಡರು.

ಮೃತ ದಹಿಯಾ ಅವರು ಮೂಲತಃ ಹರಿಯಾಣದ ಸೋನಿಪತ್‌ನವರು ಎಂದು ಪೊಲೀಸರು ತಿಳಿಸಿದ್ದಾರೆ. 

ಇನ್‌ಸ್ಟಿಟ್ಯೂಟ್‌ನ ಈಜು ಕೊಳದಲ್ಲಿ ವ್ಯಕ್ತಿಯೊಬ್ಬ ಮುಳುಗುತ್ತಿದ್ದಾನೆ ಎಂದು ಕೆಲವರು ಪೊಲೀಸರಿಗೆ ತಿಳಿಸಿದ್ದರು. ನೀರಲ್ಲಿ ಮುಳುಗಿದ ವ್ಯಕ್ತಿಯನ್ನು ಒಡನೆಯೇ ಪೋರ್ಟಿಸ್‌ ಆಸ್ಪತ್ರೆಗೆ ಒಯ್ದಾಗ ಅಲ್ಲಿನ ವೈದ್ಯರು ಆತ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಪೊಲೀಸು ತಿಳಿಸಿದ್ದಾರೆ. 

ಮೃತ ದಹಿಯಾ ಅವರು ಈಜು ಕೊಳ ಸಮೀಪ, ಇಂಡಿಯನ್‌ ಫಾರೀನ್‌ ಮತ್ತು ರೆವೆನ್ಯೂ ಸರ್ವಿಸಸ್‌ನ ತನ್ನ ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ  ಭಾಗವಹಿಸುತ್ತಿದ್ದರು. ಪಾರ್ಟಿ ನಡೆಯುತ್ತಿದ್ದ ವೇಳೆ “ಮೋಜಿಗಾಗಿ ಈಜೋಣ’ ಎಂದು ದಹಿಯಾ ಮತ್ತು ಅವರ ಸ್ನೇಹಿತರು ನಿರ್ಧರಿಸಿ ಅಂತೆಯೇ ಈಜುಕೊಳಕ್ಕೆ ಇಳಿದರು. ಬಹುಷಃ ಅದಕ್ಕೆ ಮುನ್ನ  ದಹಿಯಾ ಮದ್ಯಪಾನ ಮಾಡಿದ್ದಿರಬೇಕು ಎಂದು ಪೊಲೀಸರು ಹೇಳಿದರು. 

ಪ್ರತ್ಯಕ್ಷದರ್ಶಿಗಳ ಪ್ರಕಾರ ಪಾರ್ಟಿಯ ವೇಳೆ ಮಹಿಳಾ ಅಧಿಕಾರಿಯೋರ್ವರು ಆಕಸ್ಮಿಕವಾಗಿ ಈಜುಕೊಳಕ್ಕೆ ಬಿದ್ದರು; ಅವರನ್ನು ರಕ್ಷಿಸಲು ದಹಿಯಾ ಮುಂದಾದರು. ಮಹಿಳಾ ಅಧಿಕಾರಿಯನ್ನು ಮೇಲಿದ್ದವರು ಹೇಗೋ ಮೇಲಕ್ಕೆತ್ತಿದರು; ಆದರೆ ದಹಿಯಾ ಮುಳುಗಿ ಮೃತಪಟ್ಟರು. 

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.