ತ್ರಾಲ್ ಎನ್ಕೌಂಟರ್ನಲ್ಲಿ ಉಗ್ರ ವಾನಿ ಅನುಚರ ಹತ್ಯೆ
Team Udayavani, Mar 6, 2017, 3:45 AM IST
ಶ್ರೀನಗರ: ದಕ್ಷಿಣ ಕಾಶ್ಮೀರದ ತ್ರಾಲ್ನಲ್ಲಿ ಶನಿವಾರ ರಾತ್ರಿಯಿಂದ ನಡೆಯುತ್ತಿದ್ದ 12 ಗಂಟೆಗಳ ಎನ್ಕೌಂಟರ್ ಭಾನುವಾರ ಮುಕ್ತಾಯವಾಗಿದೆ. ಈ ಕಾಳಗದಲ್ಲಿ ಉಗ್ರ ಬುರ್ಹಾನ್ ವಾನಿಯ ಅನುಚರ ಅಕೀಬ್ ಭಟ್ ಹಾಗೂ ಮತ್ತೂಬ್ಬ ಉಗ್ರನನ್ನು ಕೊಲ್ಲಲಾಗಿದೆ. ಅಕೀಬ್ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವನಾದರೆ, ಮತ್ತೂಬ್ಬ ಉಗ್ರ ಜೈಶ್-ಎ-ಮೊಹಮ್ಮದ್ಗೆ ಸೇರಿದವ. ಈ ಕಾಳಗದಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಕೂಡಾ ಪ್ರಾಣಾರ್ಪಣೆ ಮಾಡಿಕೊಂಡಿದ್ದಾರೆ. ಗುಂಡಿನ ಚಕಮಕಿ ಕೊನೆಯ ಹಂತಕ್ಕೆ ಬಂದು ಇನ್ನೇನು ಅಸುನೀಗುವುದು ಖಚಿತ ಎಂದು ಗೊತ್ತಾಗುತ್ತಿದ್ದಂತೆಯೇ ಭಟ್ ತಂದೆಗೆ ಫೋನ್ ಮಾಡಿ ವಿದಾಯ ಹೇಳಿದ್ದಾನೆ ಎಂಬ ಅಂಶವನ್ನು ರಕ್ಷಣಾ ಪಡೆಯ ಹಿರಿಯ ಅಧಿಕಾರಿ ಖಚಿತಪಡಿಸಿಕೊಂಡಿದ್ದಾರೆ. ಇಬ್ಬರು ಉಗ್ರರ ಇರುವಿಕೆಯ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಪೊಲೀಸರು ಮತ್ತು ಸೇನೆಯ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದಿದ್ದವು. ಜತೆಗೆ ಸ್ಥಳೀಯರು ಪ್ರತಿಭಟನೆ ನಡೆಸದಂತೆ ನಿಷೇಧಾಜ್ಞೆಯನ್ನೂ ವಿಧಿಸಲಾಗಿತ್ತು. ವಾನಿ ಸಾವಿನ ಬಳಿಕ ಕಾಶ್ಮೀರದಲ್ಲಿ ದೀರ್ಘ ಕಾಲ ಕರ್ಫ್ಯೂ ಜಾರಿಯಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ