ಶಬರಿಮಲೆಯಲ್ಲಿ ನಾಲ್ವರು ಮಂಗಳಮುಖಿಯರನ್ನು ತಡೆದ ಪೊಲೀಸರು
Team Udayavani, Dec 16, 2018, 11:44 AM IST
ಕೊಟ್ಟಾಯಂ: ಶಬರಿ ಮಲೆ ದೇಗುಲ ಪ್ರವೇಶಿಸದಂತೆ ನಾಲ್ವರು ಮಂಗಳಮುಖಿಯರಿಗೆ ಪೊಲೀಸರು ತಡೆ ಹಾಕಿದ ಘಟನೆ ಭಾನುವಾರ ನಡೆದಿದೆ.
ನಾಲ್ವರು ಮಂಗಳಮುಖಿಯರ ಪೈಕಿ ಅನನ್ಯ ಎಂಬ ಒಬ್ಟಾಕೆ ಮಾತನಾಡಿ ನಮಗೆ ಪೊಲೀಸರು ಅವಮಾನ ಮಾಡಿ, ಹೆದರಿಸಿದರು. ದೇವಾಲಯದ ಮೂಲ ಶಿಬಿರವಾದ ಎರುಮಲೈನಿಂದ ನಮ್ಮನ್ನು ಹಿಂದಕ್ಕೆ ಕಳುಹಿಸಿದರು ಎಂದು ಹೇಳಿಕೊಂಡಿದ್ದಾರೆ.
ಎರ್ನಾಕುಲಂನಿಂದ ನಾವು ನಮ್ಮ ಯಾತ್ರೆ ಆರಂಭಿಸಿದ್ದೆವು. ವಿಶೇಷ ಪೊಲೀಸ್ ಸಿಬಂದಿಗಳು ನಮ್ಮ ಪ್ರಾರ್ಥನೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ಗಮನಿಸಿದ್ದರು. ಆದರೆ ನಾವು ಎರುಮಲೈ ತಲುಪಿದಾಗ ಪೊಲೀಸರು ಒರಟಾಗಿ ವರ್ತಿಸಿದರು. ಮಹಿಳಾ ಅಧಕಾರಿಗಳೂ ನಮ್ಮೊಂದಿಗೆ ಹಾಗೆಯೇ ವರ್ತಿಸಿದರು ಎಂದು ಅನನ್ಯ ಹೇಳಿಕೊಂಡಿದ್ದಾರೆ.
ಮೊದಲು ಅವರು ಮಹಿಳೆಯರ ವಸ್ತ್ರಗಳಲ್ಲಿ ನಿಮ್ಮನ್ನು ನಾವು ದೇವಾಲಯ ಪ್ರವೇಶಿಸಲು ಬಿಡುವುದಿಲ್ಲ , ಪುರುಷರಂತೆ ವಸ್ತ್ರ ಧರಿಸಿ ಎಂದರು. ಮೊದಲು ನಾವು ಸಾಧ್ಯವಿಲ್ಲ ಎಂದೆವಾದರೂ ಬಳಿಕ ಮನಸ್ಸು ಬದಲಿಸಿ ವಸ್ತ್ರ ಬದಲಾಯಿಸಿಕೊಳ್ಳಲು ಒಪ್ಪಿದೆವಾದರೂ ಪೊಲೀಸರು ಮಾತ್ರ ನಮಗೆ ದೇವಾಲಯ ಪ್ರವೇಶಿಸಿಲು ಅವಕಾಶ ನೀಡಲಿಲ್ಲ ಎಂದಿದ್ದಾರೆ.
ಸೆಪ್ಟಂಬರ್ 28 ರ ಬಳಿಕ ದೇವಾಲಯದ ಪ್ರಾಂಗಣದಲ್ಲಿ ನಿರಂತರ ಪ್ರತಿಭಟನೆಗಳು ನಡೆಯುತ್ತಿವೆ. ಸುಪ್ರೀಂ ಕೋರ್ಟ್ ಎಲ್ಲಾ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದು ತೀರ್ಪು ನೀಡಿತ್ತು. ಬಿಜೆಪಿ ಕೂಡ ತೀರ್ಪು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್