9 ವರ್ಷಗಳಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ: ಪ್ರಧಾನಿ ಮೋದಿ
ನಮ್ಮ ಸರಕಾರದ ಪಾರದರ್ಶಕ ವ್ಯವಸ್ಥೆ, ಪ್ರಾಮಾಣಿಕ ಪ್ರಯತ್ನಗಳು...
Team Udayavani, Jan 18, 2024, 7:46 PM IST
ಹೊಸದಿಲ್ಲಿ: ನಮ್ಮ ಸರಕಾರವು ಜಾರಿಗೆ ತಂದ ಪಾರದರ್ಶಕ ವ್ಯವಸ್ಥೆ, ಅದರ ಪ್ರಾಮಾಣಿಕ ಪ್ರಯತ್ನಗಳು ಮತ್ತು ಜನರ ಭಾಗವಹಿಸುವಿಕೆಗೆ ಒತ್ತು ನೀಡಿದ್ದರಿಂದ ಕಳೆದ ಒಂಬತ್ತು ವರ್ಷಗಳಲ್ಲಿ ಸುಮಾರು 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪ್ರತಿಪಾದಿಸಿದ್ದಾರೆ.
‘ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ’ಯ ಫಲಾನುಭವಿಗಳೊಂದಿಗೆ ವರ್ಚುವಲ್ ಸಂವಾದದ ಸಮಯದಲ್ಲಿ ಮಾತನಾಡಿದ ಪ್ರಧಾನಿ, ”ಭಾರತದಲ್ಲಿ ಬಡತನ ಕಡಿಮೆಯಾಗಬಹುದು ಎಂದು ಯಾರೂ ಭಾವಿಸಿರಲಿಲ್ಲ ಆದರೆ ಬಡವರು ಅವರಿಗೆ ಸಂಪನ್ಮೂಲಗಳನ್ನು ನೀಡಿದರೆ ಅದು ಸಾಧ್ಯ ಎಂದು ತೋರಿಸಿದ್ದಾರೆ” ಎಂದರು.
ಬಡತನದ ಇಳಿಕೆಯನ್ನು ಎತ್ತಿ ಹಿಡಿದ ನೀತಿ ಆಯೋಗದ ಇತ್ತೀಚಿನ ವರದಿಯನ್ನು ಉಲ್ಲೇಖಿಸಿ, ಸರಕಾರದ ಮೇಲೆ ಜನರ ನಂಬಿಕೆ ಎಲ್ಲೆಡೆ ಗೋಚರಿಸುತ್ತಿದೆ. ಬಡವರಿಗೆ ಸಹಾಯ ಮಾಡುವಲ್ಲಿ ಭಾರತವು ಇತರ ದೇಶಗಳಿಗೆ ಮಾದರಿಯಾಗಿದೆ ಮತ್ತು ಇದು ಜಾಗತಿಕ ಗಮನವನ್ನು ಸೆಳೆದಿದೆ.ಇದು ಅತ್ಯಂತ ಉತ್ತೇಜಕ ವರದಿಯಾಗಿದೆ ಎಂದರು.
ವಿಕಸಿತ್ ಭಾರತ್ ಯಾತ್ರೆಯು ತನ್ನ ಕಲ್ಪನೆಗೂ ಮೀರಿದ ಯಶಸ್ಸನ್ನು ಕಂಡಿದೆ ಮತ್ತು ಕಲ್ಯಾಣ ಯೋಜನೆಗಳನ್ನು ಪ್ರಚಾರ ಮಾಡಲು ಮತ್ತು ಹೆಚ್ಚಿನ ಫಲಾನುಭವಿಗಳನ್ನು ಸೇರಿಸಿಕೊಳ್ಳಲು ವಾಹನಗಳು ತಮ್ಮ ಸ್ಥಳಗಳಿಗೆ ಭೇಟಿ ನೀಡಬೇಕು ಎಂಬ ಜನಸಾಮಾನ್ಯರಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಸರಕಾರ ಜನವರಿ 26 ರ ನಂತರ ಅದನ್ನು ಇನ್ನಷ್ಟು ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು