TDB ದೇಗುಲಗಳ ಆವರಣದಲ್ಲಿ ಆರ್ಎಸ್ಎಸ್ ಚಟುವಟಿಕೆಗೆ ಟಿಡಿಬಿ ಬ್ರೇಕ್
Team Udayavani, Oct 22, 2023, 10:52 PM IST
ತಿರುವನಂತಪುರ: ಅನುಮತಿ ಪಡೆಯದೇ ಕೇರಳದ ದೇಗುಲಗಳ ಆವರಣದಲ್ಲಿ ಸಂಘದ ಕಾರ್ಯ ಚಟುವಟಿಕೆಗಳನ್ನು ನಡೆಸಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ಎಸ್ಎಸ್ಗೆ ತಿರುವಾಂಕೂರು ದೇವಸ್ಥಾನಗಳ ಮಂಡಳಿ(ಟಿಡಿಬಿ) ಎಚ್ಚರಿಕೆ ನೀಡಿದೆ.
ಈ ಸಂಬಂಧ ಟಿಡಿಬಿ ಆಯುಕ್ತರು ಶುಕ್ರವಾರ ಹೊಸದಾಗಿ ಆದೇಶ ಹೊರಡಿಸಿದ್ದಾರೆ. “ಅನುಮತಿ ಇಲ್ಲದೇ ದೇಗುಲಗಳ ಆವರಣದಲ್ಲಿ ಆರ್ಎಸ್ಎಸ್ ಅಥವಾ ಇತರೆ ಧಾರ್ಮಿಕ ಸಂಘಟನೆಗಳು ನಡೆಸುವ ಕಾರ್ಯ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ದೇಗುಲಗಳ ಆವರಣದಲ್ಲಿ ಯಾವುದೇ ಸಂಘಟನೆಯ ಅಥವಾ ರಾಜಕೀಯ ಪಕ್ಷಗಳ ಬಾವುಟಗಳು ಅಥವಾ ಪೋಸ್ಟರ್ಗಳನ್ನು ಹಾಕುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆಯೂ ಕೂಡ ಇದೇ ರೀತಿಯ ಆದೇಶವನ್ನು ಹೊರಡಿಸಲಾಗಿತ್ತು. ಆದರೆ ಅದು ಪಾಲನೆ ಆಗುತ್ತಿರಲಿಲ್ಲ. ಆದರೆ ಈಗ ಕಠಿಣ ಕ್ರಮದ ಎಚ್ಚರಿಕೆಯೊಂದಿಗೆ ಆದೇಶ ಹೊರಡಿಸಲಾಗಿದೆ.
ಇದೇ ವೇಳೆ, ಈ ನಿಯಮಗಳು ಪಾಲನೆ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ದೇಗುಲಗಳಿಗೆ ನಿಯಮಿತವಾಗಿ ಅನಿರೀಕ್ಷಿತ ಭೇಟಿ ನೀಡುವಂತೆ ಟಿಡಿಬಿ ವಿಚಕ್ಷಣ ದಳಕ್ಕೆ ಆಯುಕ್ತರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ