
ಸಂಸತ್ ಭವನದ ಉದ್ಘಾಟನೆಯನ್ನು ಮೋದಿ ಪಟ್ಟಾಭಿಷೇಕವೆಂದು ಪರಿಗಣಿಸಿದ್ದಾರೆ: Rahul Gandhi ಟೀಕೆ
Team Udayavani, May 28, 2023, 4:13 PM IST

ಹೊಸದಿಲ್ಲಿ: ವಿರೋಧ ಪಕ್ಷಗಳ ಬಹಿಷ್ಕಾರದ ಕರೆ ನಡುವೆ ಭಾನುವಾರ ಹೊಸ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದು, ” ಪ್ರಧಾನಿಯವರು ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕವೆಂದು ಪರಿಗಣಿಸಿದ್ದಾರೆ ” ಎಂದು ವ್ಯಂಗ್ಯವಾಡಿದರು.
ಅಲ್ಲದೆ ‘ಸಂಸತ್ ಜನರ ಧ್ವನಿ’ ಎಂದಿದ್ದಾರೆ. ಸುಮಾರು 20 ವಿರೋಧ ಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿದೆ ಇರುವುದನ್ನು ಕಾರಣವಾಗಿರಿಸಿ ಬಹಿಷ್ಕಾರ ಮಾಡಿವೆ. ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಮೇಲೆ “ಗಂಭೀರ ಅವಮಾನ” ಮತ್ತು “ನೇರ ಆಕ್ರಮಣ” ಎಂದು ಕರೆದರು.
संसद लोगों की आवाज़ है!
प्रधानमंत्री संसद भवन के उद्घाटन को राज्याभिषेक समझ रहे हैं।
— Rahul Gandhi (@RahulGandhi) May 28, 2023
ಹೊಸ ಸಂಸತ್ ಭವನ ಉದ್ಘಾಟನೆಗೂ ಮುನ್ನ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಗಣಪತಿ ಹೋಮವನ್ನು ನೆರವೇರಿಸಿದರು. ಪ್ರಧಾನಮಂತ್ರಿಯವರು ತಮಿಳುನಾಡಿನ ವಿವಿಧ ಅಧೀನಗಳ ಪ್ರಧಾನ ಅರ್ಚಕರಿಂದ ಆಶೀರ್ವಾದ ಪಡೆದರು ಮತ್ತು ನಂತರ ಹೊಸ ಸಂಸತ್ತಿನ ಕಟ್ಟಡದಲ್ಲಿ ಲೋಕಸಭಾ ಸ್ಪೀಕರ್ ಕುರ್ಚಿಯ ಬಳಿ ಸೆಂಗೋಲ್ ಅನ್ನು ಸ್ಥಾಪಿಸಿದರು.
ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತಮ್ಮ ಇತ್ತೀಚಿನ ಟ್ವಿಟ್ಟರ್ ಪೋಸ್ಟ್ನಲ್ಲಿ ಪಿಎಂ ಮೋದಿಯನ್ನು ‘ಸಂಸದೀಯ ಕಾರ್ಯವಿಧಾನಗಳನ್ನು ದ್ವೇಷಿಸುವ ಸ್ವಯಂಪ್ರೇರಿತ ಸರ್ವಾಧಿಕಾರಿ ಪ್ರಧಾನಿ’ ಎಂದು ಕರೆದಿದ್ದಾರೆ. ಅಲ್ಲದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೊಸ ಸಂಸತ್ತಿನ ಉದ್ಘಾಟನೆಗೆ ಅವಕಾಶ ನೀಡದ ಕೇಸರಿ ಪಾಳೆಯದ ಮೇಲೆ ಮತ್ತೆ ದಾಳಿಯನ್ನು ಹೆಚ್ಚಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haryana ಬೈಕ್ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್ಗೆ GST ಬಾಕಿ ಕುರಿತು ನೋಟಿಸ್

Politics: 32 ಆಪ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕೇಜ್ರಿವಾಲ್ ಗೆ ಬಾಜ್ವಾ ಸಂದೇಶ

ಯೋಧನನ್ನು ಥಳಿಸಿ PFI ಎಂದು ಬರೆದ ಪ್ರಕರಣಕ್ಕೆ ಟ್ವಿಸ್ಟ್!ತನಿಖೆಯಲ್ಲಿ ನಿಜಾಂಶ ಬಯಲು

Bengal: ಕೆಂಪು ಟೀ ಶರ್ಟ್ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!
MUST WATCH
ಹೊಸ ಸೇರ್ಪಡೆ

ಪುಟ್ಟ ದೇಶದ ಈ ಇಂಟೆಲಿಜೆನ್ಸ್ ಏಜೆನ್ಸಿ ಭಾರತದ ʻರಾʼ ಗಿಂತಲೂ ಪವರ್ಫುಲ್..!

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

ಪುಟ್ಟಕ್ಕನ ಮಕ್ಕಳ ಔಟಿಂಗ್

AsianGames: ಒಂದು ಮೊಬೈಲ್ಗಾಗಿ ಸಾವಿರಾರು ಕಸದಬ್ಯಾಗ್ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್