I.N.D.I.A.ಮೈತ್ರಿ ಕೂಟದಲ್ಲಿ ಹೆಚ್ಚಿದ ಬಿರುಕು?:ಡಿ.6ರ ಸಭೆ ಬಗ್ಗೆ ಟಿಎಂಸಿಗೆ ಗೊತ್ತೇ ಇಲ್ಲ
ಇದು ಕಾಂಗ್ರೆಸ್ ಸೋಲು, ಜನರದ್ದಲ್ಲ ಎಂದ ಮಮತಾ
Team Udayavani, Dec 4, 2023, 5:49 PM IST
ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಎದುರಿಸಲು ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ರಚಿಸಿದ್ದ ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನ ಕುರಿತು ಪ್ರಶ್ನೆಗಳು ಎದ್ದಿದ್ದು, ಡಿ.6 ರಂದು ದೆಹಲಿಯಲ್ಲಿ ಕರೆಯಲಾಗಿರುವ ಸಭೆಯ ಕುರಿತು ಪ್ರಮುಖ ಪಕ್ಷ ಟಿಎಂಸಿ ಗೆ ಗೊತ್ತೇ ಇಲ್ಲ ಎನ್ನಲಾಗಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಉತ್ತರ ಬಂಗಾಳದಲ್ಲಿ ಕಾರ್ಯಕ್ರಮವನ್ನು ನಿಗದಿಪಡಿಸಿರುವ ಕಾರಣ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದ್ದು, ಪಕ್ಷದ ಪ್ರತಿನಿಧಿಗಳು ಯಾರಾದರೂ ಸಭೆಯಲ್ಲಿ ಭಾಗಿಯಾಗುತ್ತಾರೋ ಎನ್ನುವ ಪ್ರಶ್ನೆ ಮೂಡಿದೆ.
ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿನ ಕುರಿತು ”ಇದು ಕಾಂಗ್ರೆಸ್ ಸೋಲು, ಜನರದ್ದಲ್ಲ” ಎಂದು ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದರು. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕೂಡ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿ ”ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧದ ಹೋರಾಟವನ್ನು ಮುನ್ನಡೆಸಬೇಕು” ಎಂದು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ