ಬಂಗಾಳದ ಹಿಂಸಾಚಾರ ಮಿತಿಮೀರಿದೆ: ಸಂಸದ ಸ್ಥಾನಕ್ಕೆ ಟಿಎಂಸಿ ತ್ರಿವೇದಿ ರಾಜೀನಾಮೆ!
ಪಕ್ಷಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ತ್ರಿವೇದಿ, ನಾನು ಪಶ್ಚಿಮಬಂಗಾಳಕ್ಕೆ ತೆರಳಿ, ರಾಜ್ಯಕ್ಕಾಗಿ ದುಡಿಯುತ್ತೇನೆ
Team Udayavani, Feb 12, 2021, 2:32 PM IST
ನವದೆಹಲಿ: ಏಪ್ರಿಲ್-ಮೇ ತಿಂಗಳಿನಲ್ಲಿ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸರಣಿ ನಾಟಕೀಯ ಬೆಳವಣಿಗೆಯಲ್ಲಿ ಟಿಎಂಸಿ ಪಕ್ಷವನ್ನು ತೊರೆದಿರುವ ನಡುವೆಯೇ ಶುಕ್ರವಾರ(ಫೆ.12, 2021) ತೃಣಮೂಲ ಕಾಂಗ್ರೆಸ್ ಮುಖಂಡ ದಿನೇಶ್ ತ್ರಿವೇದಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ರೋಣ ನಿರೀಕ್ಷೆಯಲ್ಲಿ ನೀತಾ ಅಶೋಕ್ : ಮೊದಲ ಚಿತ್ರದಲ್ಲೇ ಗ್ರ್ಯಾಂಡ್ ಎಂಟ್ರಿ
ಪಶ್ಚಿಮಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರ ಗಾಬರಿ ಹುಟ್ಟಿಸುತ್ತಿದೆ. ಇದರು ಪ್ರಜಾಪ್ರಭುತ್ವಕ್ಕೆ ಮಾರಕ. ಹೀಗಾಗಿ ಇಲ್ಲಿ ಕುಳಿತುಕೊಳ್ಳುವುದು ನಿಜಕ್ಕೂ ಅಚ್ಚರಿಯ ಭಾವನೆ ಮೂಡಿಸುತ್ತಿದೆ. ಇದೀಗ ನಾನೇನು ಮಾಡಲಿ ಎಂದು ಯೋಚಿಸುತ್ತಿದ್ದೇನೆ. ನಾನು ನನ್ನ ಪಕ್ಷದ ಸೂಚನೆ ಪಾಲಿಸಲೇ? ನಿಜಕ್ಕೂ ಅನುಸರಿಸಬೇಕು, ನನ್ನ ಆತ್ಮ ಹೇಳುತ್ತದೆ ನಾನಿಲ್ಲಿ ಕುಳಿತು ಹೇಳಲು ಏನು ಇಲ್ಲ. ಈ ನಿಟ್ಟಿನಲ್ಲಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ತ್ರಿವೇದಿ ಹೇಳಿದರು.
ನಮ್ಮ ತಾಯ್ನೆಲಕ್ಕಾಗಿ ಮಾತ್ರ ಇಲ್ಲಿಗೆ ಬಂದಿದ್ದೇವೆ. ನನ್ನನ್ನು ಈ ಸದನಕ್ಕೆ ಕಳುಹಿಸಿರುವ ನನ್ನ ಪಕ್ಷಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ತ್ರಿವೇದಿ, ನಾನು ಪಶ್ಚಿಮಬಂಗಾಳಕ್ಕೆ ತೆರಳಿ, ರಾಜ್ಯಕ್ಕಾಗಿ ದುಡಿಯುತ್ತೇನೆ ಎಂದು ತಿಳಿಸಿದ್ದಾರೆ.
ತ್ರಿವೇದಿ ರಾಜೀನಾಮೆ ಟಿಎಂಸಿಗೆ ಅಚ್ಚರಿ ಹುಟ್ಟಿಸಿದೆ. ಆದರೆ ಮೂಲಗ ಪ್ರಕಾರ, ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಹೊಗಳಿ ತ್ರಿವೇದಿ ಟ್ವೀಟ್ ಮಾಡಿರುವುದಾಗಿ ತಿಳಿಸಿದ್ದು, ಇವರು ಕೂಡಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಂಬಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ