ತ್ರಿಬ್ಬಲ್ ರೈಡಿಂಗ್ ಅಪಘಾತಕ್ಕೆ ಪರಿಹಾರ ಇಲ್ಲ: ಮದ್ರಾಸ್ ಹೈಕೋರ್ಟ್ನ ಮಹತ್ವದ ತೀರ್ಪು
ಇಬ್ಬರು ಸಹ ಸವಾರರ ಸಾವಿಗೂ ಬೈಕ್ ಸವಾರನೇ ಕಾರಣ: ನ್ಯಾಯಪೀಠ
Team Udayavani, Aug 23, 2022, 7:40 AM IST
ಚೆನ್ನೈ: ದ್ವಿಚಕ್ರ ವಾಹನದಲ್ಲಿ ನಿಯಮ ಮೀರಿ ಮೂವರು ಪ್ರಯಾಣಿಸುತ್ತಿದ್ದ ಕಾರಣ ಚಾಲಕನ ಕುಟುಂಬಕ್ಕೆ ಮೋಟಾರು ವಾಹನಗಳ ನಿಯಮಗಳ ಅನ್ವಯ ಪರಿಹಾರ ನೀಡಲು ಸಾಧ್ಯವಾಗದು. ಜತೆಗೆ ಆತ ಇನ್ನಿಬ್ಬರ ಸಾವಿಗೆ ಕಾರಣನಾಗಿದ್ದಾನೆ ಎಂದು ಮದ್ರಾಸ್ ಹೈಕೋರ್ಟ್ನ ನ್ಯಾ.ಆರ್.ತಾರಣಿ ನೇತೃತ್ವದ ನ್ಯಾಯಪೀಠ ಆದೇಶ ನೀಡಿದೆ.
ಹೀಗಾಗಿ, ಮೋಟಾರು ವಾಹನಗಳ ಅಪಘಾತ ನ್ಯಾಯಮಂಡಳಿ (ಎಂಎಸಿಟಿ)ಯ ವಾದ ಒಪ್ಪಲಾಗದು ಎಂದು ಅಭಿಪ್ರಾಯಪಟ್ಟಿದೆ.
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಸ್ತೆ ಅಪಘಾತದಲ್ಲಿ ಅಸುನೀಗಿದ್ದರು. ಮೋಟಾರು ವಾಹನಗಳ ಅಪಘಾತ ನ್ಯಾಯಮಂಡಳಿ ಪ್ರಕರಣದ ವಿಚಾರಣೆ ನಡೆಸಿ ಬೈಕ್ ಚಾಲಕನ ಕುಟುಂಬಕ್ಕೆ 4,50,000 ರೂ.ಪರಿಹಾರ ಪ್ರಕಟಿಸಿತ್ತು.
ಆದರೆ, ತೀರ್ಮಾನ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ನಲ್ಲಿ ನಡೆದಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾ.ಆರ್.ತಾರಣಿ ನೇತೃತ್ವದ ನ್ಯಾಯಪೀಠ “ಅಪಘಾತದ ವೇಳೆ ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಇದು ನಿಯಮಗಳಿಗೆ ವಿರುದ್ಧವಾದದದ್ದು.
ಹೀಗಾಗಿ, ಅವರಿಬ್ಬರೂ ಅಪಘಾತಕ್ಕೆ ಕಾರಣರಾಗಿದ್ದಾರೆ. ಜತೆಗೆ ಬೈಕ್ ಸವಾರ ಕೂಡ ಅವರಿಬ್ಬರ ಸಾವಿಗೆ ಕಾರಣನಾಗಿದ್ದಾನೆ. ಹೀಗಾಗಿ, ಆತನ ಕುಟುಂಬಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ’ ಎಂದು ತೀರ್ಪು ನೀಡಿದೆ.
ವಿಮಾ ಕಂಪನಿ ನ್ಯಾಯಮಂಡಳಿ ತೀರ್ಪು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಜತೆಗೆ ಬೈಕ್ ಸವಾರ ಮದ್ಯ ಸೇವಿಸಿದ್ದ, ಘಟನೆ ನಡೆದ ದಿನಾಂಕ, ಸಮಯವನ್ನು ತಪ್ಪಾಗಿ ನಮೂದಿಸಲಾಗಿದೆ ಎಂದು ವಾದಿಸಿತ್ತು. ಹೀಗಾಗಿ, ಸವಾರನಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ