ಲೋಕಸಭೆಯಲ್ಲಿ ಮತ್ತೆ ತ್ರಿವಳಿ ತಲಾಖ್‌ ಗದ್ದಲ


Team Udayavani, Jun 22, 2019, 5:00 AM IST

27

ನವದೆಹಲಿ: ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ, ವಿರೋಧದ ನಡುವೆಯೇ ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಹೊಸ ವಿಧೇಯಕವನ್ನು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ಮಂಡನೆ ಮಾಡಿದೆ.

ಮುಸ್ಲಿಮರಲ್ಲಿ ಜಾರಿಯಲ್ಲಿರುವಂಥ ಏಕಕಾಲಕ್ಕೆ 3 ಬಾರಿ ‘ತಲಾಖ್‌’ ಹೇಳಿ ವಿಚ್ಛೇದನ ನೀಡುವ ‘ತ್ರಿವಳಿ ತಲಾಖ್‌’ ಪದ್ಧತಿಯನ್ನು ನಿಷೇಧಿಸುವ ಮುಸ್ಲಿಂ ಮಹಿಳೆಯರ(ವೈವಾಹಿಕ ಹಕ್ಕುಗಳ ರಕ್ಷಣೆ) ವಿಧೇಯಕ 2019 ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ, ಲೋಕಸಭೆಯಲ್ಲಿ ಮಂಡನೆಯಾದ ಮೊದಲ ಮಸೂದೆ ಇದು.

186 ಸದಸ್ಯರ ಬೆಂಬಲ: ಇದು ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣದ ಆಶಯವುಳ್ಳಂಥ ವಿಧೇಯಕ ಎಂದು ಕೇಂದ್ರ ಸರ್ಕಾರ ವಾದಿಸಿದರೆ, ಪ್ರತಿಪಕ್ಷಗಳ ನಾಯಕರು ಮಾತ್ರ ಇದನ್ನು ಒಪ್ಪದೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಧೇಯಕವನ್ನು ಮತಕ್ಕೆ ಹಾಕಿದಾಗ, ಕಲಾಪದಲ್ಲಿ ಹಾಜರಿದ್ದ 186 ಸದಸ್ಯರು ಬೆಂಬಲ ಸೂಚಿಸಿ, 74 ಸದಸ್ಯರು ವಿರೋಧಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹಾಗೂ ಜಗನ್ಮೋಹನ್‌ ರೆಡ್ಡಿ ನೇತೃತ್ವದ ವೈಎಸ್ಸಾರ್‌ ಕಾಂಗ್ರೆಸ್‌ ಮತದಾನದಿಂದ ದೂರವುಳಿದರೆ, ಜೆಡಿಯು ತ್ರಿವಳಿ ತಲಾಖ್‌ ವಿಧೇಯಕವನ್ನು ವಿರೋಧಿಸುವುದಾಗಿ ಹೇಳಿದೆ. ನವೀನ್‌ ಪಾಟ್ನಾಯಕ್‌ ನೇತೃತ್ವದ ಬಿಜೆಡಿ ಕೂಡ ವಿಧೇಯಕವನ್ನು ಬೆಂಬಲಿಸಿಲ್ಲ.

ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಅವರು ಮಸೂದೆ ಮಂಡಿಸಲು ಮುಂದಾದಾಗ, ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು. ಕೊನೆಗೆ ಸ್ಪೀಕರ್‌ ಓಂ ಬಿರ್ಲಾ ಅವರು ವಿಧೇಯಕದ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಿದರು.

ಘನತೆ ಕಾಪಾಡಲು ಬದ್ಧ: ರವಿಶಂಕರ್‌ ಪ್ರಸಾದ್‌ವಿಧೇಯಕದ ಕುರಿತು ಮಾತನಾಡಿದ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌, ಲಿಂಗ ಸಮಾನತೆ ಮತ್ತು ನ್ಯಾಯಕ್ಕಾಗಿ ಈ ಕಾನೂನು ತರಲೇಬೇಕಾಗಿದೆ. ಇಲ್ಲಿ ಧರ್ಮದ ಪ್ರಶ್ನೆ ಉದ್ಭವಿಸುವುದಿಲ್ಲ, ಬದಲಿಗೆ ಮಹಿಳೆಯರಿಗೆ ನ್ಯಾಯ ಒದಗಿಸುವ ವಿಚಾರವಷ್ಟೇ ಪ್ರಮುಖವಾಗುತ್ತದೆ. ದೇಶದಲ್ಲಿ ವರ್ಷಕ್ಕೆ 543 ತ್ರಿವಳಿ ತಲಾಖ್‌ ಕೇಸುಗಳು ದಾಖಲಾಗುತ್ತಿವೆ. ತ್ರಿವಳಿ ತಲಾಖ್‌ ನಿಷೇಧಿಸಿ ಸುಪ್ರೀಂ ಕೋರ್ಟ್‌ ತೀರ್ಪು ಬಂದ ಬಳಿಕವೂ, 200ಕ್ಕೂ ಹೆಚ್ಚು ಕೇಸುಗಳು ದಾಖಲಾಗಿವೆ. ಇದು ಮಹಿಳೆಯರ ಘನತೆಯ ಪ್ರಶ್ನೆಯಾಗಿರುವ ಕಾರಣ, ನಾವು ಈ ವಿಧೇಯಕಕ್ಕೆ ಬದ್ಧರಾಗಿದ್ದೇವೆ ಎಂದರು.

ಸಾರ್ವತ್ರಿಕ ವಿಧೇಯಕ ತನ್ನಿ: ಶಶಿ ತರೂರ್‌: ಚರ್ಚೆಗೆ ನಾಂದಿ ಹಾಡಿ ಮಾತನಾಡಿದ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ‘ಏಕಕಾಲಕ್ಕೆ ತ್ರಿವಳಿ ತಲಾಖ್‌ ನೀಡುವ ಪದ್ಧತಿಯನ್ನು ನಾನು ವಿರೋಧಿಸುತ್ತೇನೆ. ಆದರೆ, ಈ ವಿಧೇಯಕವನ್ನು ಖಂಡಿಸುತ್ತೇನೆ. ಏಕೆಂದರೆ, ಈ ವಿಧೇಯಕದಲ್ಲಿ ಒಂದು ಸಮುದಾಯವನ್ನಷ್ಟೇ ಕೇಂದ್ರೀಕರಿಸಲಾಗಿದೆ. ಪತ್ನಿಯನ್ನು ತ್ಯಜಿಸುವಂಥ ಕೆಲಸಗಳು ಮುಸ್ಲಿಂ ಸಮುದಾಯದಲ್ಲಿ ಮಾತ್ರವೇ ನಡೆಯುವಂಥದ್ದೇನೂ ಅಲ್ಲ. ನನ್ನ ಪ್ರಕಾರ, ಪತ್ನಿಯನ್ನು ತ್ಯಜಿಸುವಂಥ ಎಲ್ಲ ಸಮುದಾಯದ ಪುರುಷರಿಗೂ ಅನ್ವಯವಾಗುವ ಸಾರ್ವತ್ರಿಕ ವಿಧೇಯಕವನ್ನು ತರಬೇಕು’ ಎಂದು ಆಗ್ರಹಿಸಿದರು.

ಇಬ್ಬಗೆಯ ಧೋರಣೆಯೇಕೆ?: ಚರ್ಚೆಯಲ್ಲಿ ಪಾಲ್ಗೊಂಡ ಎಐಎಂಐಎಂ ಸಂಸದ ಅಸಾದುದ್ದೀನ್‌ ಒವೈಸಿ, ‘ಮುಸ್ಲಿಂ ಮಹಿಳೆಯರ ಬಗ್ಗೆ ಇಷ್ಟೊಂದು ಒಲವು ತೋರಿಸುತ್ತಿರುವ ಇದೇ ಬಿಜೆಪಿ, ಕೇರಳದಲ್ಲಿ ಶಬರಿಮಲೆ ದೇಗುಲ ಪ್ರವೇಶಿಸುವ ಹಿಂದೂ ಮಹಿಳೆಯರ ಹಕ್ಕನ್ನು ವಿರೋಧಿಸುತ್ತದೆ. ತ್ರಿವಳಿ ತಲಾಖ್‌ ವಿಧೇಯಕವು ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ. ಪತ್ನಿಯನ್ನು ತ್ಯಜಿಸಿ ಹೋಗುವ ಮುಸ್ಲಿಂ ಪುರುಷರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ, ಅದೇ ತಪ್ಪು ಮಾಡುವ ಮುಸ್ಲಿಮೇತರ ಪುರುಷರಿಗೆ ಕೇವಲ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇದ್ಯಾವ ನ್ಯಾಯ?’ ಎಂದು ಪ್ರಶ್ನಿಸಿದರು.

ವಿಧೇಯಕದಲ್ಲೇನಿದೆ?

ಏಕಕಾಲಕ್ಕೆ ಮೂರು ಬಾರಿ ತಲಾಖ್‌ ಎಂದು ಹೇಳಿ ವಿಚ್ಛೇದನ ನೀಡುವುದು ಕಾನೂನುಬಾಹಿರವಾಗಿದ್ದು, ಅಂಥ ವ್ಯಕ್ತಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ, ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ಅದಕ್ಕೆ ತಿದ್ದುಪಡಿ ತರಲಾಗಿದೆ. ಅದರಂತೆ, ಪತ್ನಿಯ ವಾದವನ್ನು ಆಲಿಸಿದ ಬಳಿಕ ಮ್ಯಾಜಿಸ್ಟ್ರೇಟ್ ಬಯಸಿದಲ್ಲಿ, ಆರೋಪಿಗೆ ಜಾಮೀನು ನೀಡುವ ನಿಯಮವನ್ನು ಸೇರಿಸಲಾಗಿದೆ. ಈ ತಿದ್ದುಪಡಿಗೆ ಕಳೆದ ವರ್ಷದ ಆ.29ರಂದು ಸಂಪುಟದ ಒಪ್ಪಿಗೆ ಸಿಕ್ಕಿದೆ.

ಸೋನಿಯಾ ಗಾಂಧಿಯಂಥ ಮಹಿಳೆಯು ಕಾಂಗ್ರೆಸ್‌ನ ನಾಯಕಿಯಾಗಿದ್ದಾರೆ. ಆದರೂ, ತ್ರಿವಳಿ ತಲಾಖ್‌ ಮಸೂದೆಯನ್ನು ವಿರೋಧಿಸುವ ಮೂಲಕ ಲೋಕಸಭೆಯಲ್ಲಿ ಕಾಂಗ್ರೆಸ್‌ ಮಹಿಳಾ-ವಿರೋಧಿ ನಿಲುವು ತಾಳಿದೆ. ಇದು ಬಹಳ ನೋವಿನ ಸಂಗತಿ.
ರವಿಶಂಕರ್‌ ಪ್ರಸಾದ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.