ಲೋಕಸಭೆಯಲ್ಲಿ ತ್ರಿವಳಿ ತಲಾಕ್: ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ
Team Udayavani, Dec 27, 2018, 12:32 PM IST
ಹೊಸದಿಲ್ಲಿ : ಲೋಕಸಭೆಯಲ್ಲಿ ಇಂದು ಗುರುವಾರ ತ್ರಿವಳಿ ತಲಾಕ್ ಮಸೂದೆ ಮೇಲೆ ಚರ್ಚೆ ನಡೆಯಬಹುದೆಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸಂಸದರಿಗೆ ದಿನಪೂರ್ತಿ ಸದನದಲ್ಲಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ.
ತ್ರಿವಳಿ ತಲಾಕ್ ನಿಷೇಧ ಮತ್ತು ಅದರ ಅಪರಾಧೀಕರಣಕ್ಕೆ ಸಂಬಂಧಿಸಿದ ವಿಷಯದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇರಿಸಿದ್ದು ತನ್ನ ನಿಲುವೇನೆಂಬುದನ್ನು ಎಲ್ಲಿಯೂ ಬಿಟ್ಟುಕೊಡದಿರುವ ಜಾಣತನವನ್ನು ತೋರಿರುವುದು ಗಮನಾರ್ಹವಾಗಿದೆ.
ಕಾಂಗ್ರೆಸ್ ನಾಯಕರು ತ್ರಿವಳಿ ತಲಾಕ್ ಅಪರಾಧೀಕರಣ ಸಲ್ಲದೆಂದು ವಾದಿಸುತ್ತಾ ಬಂದಿದ್ದಾರೆ. ಅಂತೆಯೇ ಪ್ರಸ್ತಾವಿತ ಮಸೂದೆಗೆ ತಿದ್ದುಪಡಿ ಅಗತ್ಯವೆಂದು ಒತ್ತಾಯಿಸುತ್ತಾ ಬಂದಿದ್ದಾರೆ.
ತ್ರಿವಳಿ ತಲಾಕ್ ಮಸೂದೆಯು ಮುಸ್ಲಿಮ್ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನು ಕಲ್ಪಿಸುವ ಉದ್ದೇಶವನ್ನೂ ಹೊಂದಿದೆ.
ತಾನು ಮಸೂದೆಯ ವಿರೋಧಿ ಅಲ್ಲ; ಆದರೆ ಮಸೂದೆಗೆ ಕೆಲವೊಂದು ತಿದ್ದುಪಡಿಗಳು ಅಗತ್ಯವಿದೆ ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.
ತ್ರಿವಳಿ ತಲಾಕ್ ಮಸೂದೆಯ ಪ್ರಕಾರ ಮುಸ್ಲಿಂ ಪತಿಯು ಅಪರಾಧಿ ಎಂದು ಪರಿಗಣಿಸಲ್ಪಟ್ಟು ದಂಡನೆಗೆ ಗುರಿಯಾದ ಸಂದರ್ಭದಲ್ಲಿ ಆತನ ಪತ್ನಿಯನ್ನು ನೋಡಿಕೊಳ್ಳುವವರು ಯಾರು ? ಎಂದು ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ, ಹಿರಿಯ ಕಾಂಗ್ರೆಸ್ ನಾಯಕ, ಗುಲಾಂ ನಬೀ ಆಜಾದ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ