ಶೂನ್ಯದಿಂದ ಭರ್ಜರಿ ಬಹುಮತ:ಇದು ತ್ರಿಪುರ ಬಿಜೆಪಿ ಸಾಧನೆ!!
Team Udayavani, Mar 3, 2018, 3:21 PM IST
ಅಗರ್ತಲಾ: ತ್ರಿಪುರದಲ್ಲಿ 2013 ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಯದ್ದು ಶೂನ್ಯ ಸಂಪಾದನೆ ಆದರೆ 5 ವರ್ಷಗಳ ಬಳಿಕ ಇಂದು ಶನಿವಾರ ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದು ಕೆಂಪು ಕೋಟೆಯಲ್ಲಿ ಕೇಸರಿ ಪತಾಕೆ ಹಾರಿಸಿದೆ.
25 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಸಿಪಿಐ(ಎಂ)ಗೆ ಭಾರೀ ಆಘಾತ ನೀಡಿರುವ ಬಿಜೆಪಿ ದೇಶದ ಅತೀ ಬಡ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಣಿಕ್ ಸರ್ಕಾರ್ ಅವರ ನಿರಂತರ ಆಡಳಿತಕ್ಕೆ ಅಂತ್ಯ ಹಾಡುವಲ್ಲಿ ಯಶಸ್ವಿಯಾಗಿದೆ.
59 ಸ್ಥಾನಗಳ ಪೈಕಿ ಬಿಜೆಪಿ 41 ಸ್ಥಾನಗಳನ್ನು ಜಯಿಸುವ ಮೂಲಕ ಭರ್ಜರಿ ಬಹುಮತ ಪಡೆದಿದೆ. ಆಡಳಿತದಲ್ಲಿದ್ದ ಎಡಪಕ್ಷ 18 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡರೆ ಕಾಂಗ್ರೆಸ್ನದ್ದು ಶೂನ್ಯ ಸಂಪಾದನೆ. 2013 ರಲ್ಲಿ ಎಡಪಕ್ಷಗಳ ಮೈತ್ರಿಕೂಟ 49 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 10 ಸ್ಥಾನಗಳನ್ನು ಗೆದ್ದಿತ್ತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 4 ಚುನವಣಾ ಪ್ರಚಾರ ಸಮಾವೇಶಗಳಲ್ಲಿ ಪಾಲ್ಗೊಂಡು ಮಾಣಿಕ್ ಸರ್ಕಾರದ ಬದಲಿಗೆ ಬಿಜೆಪಿಗೆ ಮತ ನೀಡಿ, ಹೊಸ ತ್ರಿಪುರಾ ನೋಡಿ ಎಂದು ಮೋಡಿ ಮಾಡಿದ್ದರು.
ಬಿಜೆಪಿಯಿಂದ 48 ರ ಹರೆಯದ ಶಾಸಕ ಬಿಪ್ಲಾಬ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.
ತ್ರಿಪುರಾದಲ್ಲಿ 60 ಸ್ಥಾನಗಳಿದ್ದು 1 ಕ್ಷೇತ್ರದ ಅಭ್ಯರ್ಥಿ ನಿಧನ ಹೊಂದಿದ ಹಿನ್ನಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ