ತ್ರಿಪುರಾ ನೂತನ ಸಿಎಂ ಆಗಿ ಮಾಣಿಕ್‌ ಸಾಹಾ ಆಯ್ಕೆ : ಯಾರಿವರು ಮಾಣಿಕ್‌ ಸಾಹಾ?


Team Udayavani, May 14, 2022, 9:19 PM IST

ತ್ರಿಪುರಾ ಹೊಸ ಸಿಎಂ ಆಗಿ ಮಾಣಿಕ್‌ ಸಹಾ ಆಯ್ಕೆ : ಯಾರಿವರು ಮಾಣಿಕ್‌ ಸಾಹಾ?

ನವದೆಹಲಿ: ಗುಜರಾತ್‌, ಕರ್ನಾಟಕ ಮತ್ತು ಉತ್ತರಾಖಂಡದ ಬಳಿಕ ಬಿಜೆಪಿ ಹೈಕಮಾಂಡ್‌, ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರುವಂತೆಯೇ ಮತ್ತೊಬ್ಬ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದೆ.

ಈಗ ತ್ರಿಪುರಾ ಸರದಿ. ಇಲ್ಲಿ ಸಿಎಂ ಆಗಿದ್ದ ಬಿಪ್ಲವ್‌ ಕುಮಾರ್‌ ದೇವ್‌ ಅವರನ್ನು ದಿಢೀರನೇ ಬದಲಿಸಿರುವ ಬಿಜೆಪಿ ವರಿಷ್ಠರು, ಇವರ ಸ್ಥಾನಕ್ಕೆ ಕ್ಲೀನ್‌ ಇಮೇಜ್‌ ಮತ್ತು ದಂತ ವೈದ್ಯ ಮಾಣಿಕ್‌ ಸಾಹಾ ಅವರನ್ನು ಆಯ್ಕೆ ಮಾಡಿದ್ದಾರೆ.

2023ರ ಮಾರ್ಚ್‌ಗೆ ತ್ರಿಪುರಾದಲ್ಲೂ ವಿಧಾನಸಭೆ ಚುನಾವಣೆ ಇದೆ. 2020ರಲ್ಲಿ  ತ್ರಿಪುರಾ ಬಿಜೆಪಿಯಲ್ಲಿಯೂ ಆಂತರಿಕ ಭಿನ್ನಮತ ತಲೆದೋರಿತ್ತು.  ಬಿಪ್ಲವ್‌ ವಿರುದ್ಧ ಸಿಡಿದೆದ್ದಿದ್ದ ಸುದೀಪ್‌ ರಾಯ್‌ ಬರ್ಮನ್‌ರನ್ನು ಆರೋಗ್ಯ ಸಚಿವ ಸ್ಥಾನದಿಂದ ವಜಾ ಮಾಡಲಾಗಿತ್ತು. ಬಳಿಕ ರಾಯ್‌ ಬರ್ಮನ್‌ ಮತ್ತು ಆಶೀಶ್‌ ಕುಮಾರ್‌ ಸಾಹಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು. ಇದಕ್ಕೂ ಮುನ್ನ ಆಶೀಸ್‌ ದಾಸ್‌ ಕೂಡ ಮುಖ್ಯಮಂತ್ರಿ ದೇವ್‌ ಬಗ್ಗೆ ಬಹಿರಂಗವಾಗಿಯೇ ಟೀಕೆ ಮಾಡಿದ್ದರು. ಇವರನ್ನು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿತ್ತು. ಅಲ್ಲದೆ, ಕೆಲವು ಬಿಜೆಪಿ ಹಿರಿಯ ನಾಯಕರು ದೇವ್‌ ವಿರುದ್ಧ ಅಸಮಾಧಾನಗೊಂಡಿದ್ದರಿಂದ ಅನಿವಾರ್ಯವಾಗಿ ಬದಲಿಸಲಾಗಿದೆ.

ಹಾಗೆಯೇ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಆಡಳಿತ ವಿರೋಧಿ ಅಲೆ ಕಾಣಿಸಿಕೊಳ್ಳಬಾರದು ಎಂಬ ಕಾರಣದಿಂದ ಬಿಪ್ಲವ್‌ ಅವರನ್ನು ಬದಲಾವಣೆ ಮಾಡಿದೆ. ವಿಶೇಷವೆಂದರೆ, ಉತ್ತರಾಖಂಡದಲ್ಲಿ ಈ ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯೂ ಆಗಿದೆ.

ಇದನ್ನೂ ಓದಿ : ಚಾಮರಾಜನಗರ : ಆನ್ ಲೈನ್ ವಂಚನೆ ಪ್ರಕರಣವನ್ನು ಭೇದಿಸಿದ ಸೈಬರ್ ಠಾಣಾ ಪೊಲೀಸರು

ಯಾರಿವರು ಮಾಣಿಕ್‌ ಸಾಹಾ?

ಸದ್ಯ ತ್ರಿಪುರಾ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಮಾಣಿಕ್‌ ಸಾಹಾ ಅವರ ಬಗ್ಗೆ ಉತ್ತಮ ಅಭಿಪ್ರಾಯಗಳಿವೆ. ಅದರಲ್ಲೂ ಇವರ ಕ್ಲೀನ್‌ ಇಮೇಜ್‌ ಪಕ್ಷಕ್ಕೆ ಸಹಾಯಕವಾಗುವ ಸಾಧ್ಯತೆ ಇದೆ. ಹಾಗೆಯೇ ಅವರು ದಂತ ಸರ್ಜನ್‌ ಆಗಿದ್ದಾರೆ. 2016ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದ ಇವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಲಾಗಿತ್ತು. 2020ರಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.