ಯೂ ಟರ್ನ್ ಹೊಡೆದ ಎನ್ ಸಿಪಿ ಶಾಸಕರು: ಅಜಿತ್ ಬಣದಲ್ಲಿರುವ ಶಾಸಕರೆಷ್ಟು?
Team Udayavani, Nov 23, 2019, 1:33 PM IST
ಮುಂಬೈ: ಶನಿವಾರ ಬೆಳ್ಳಂಬೆಳಗ್ಗೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ತನ್ನ ಬೆಂಬಲಿಗರೊಂದಿಗೆ ಬಿಜೆಪಿಗೆ ನಿಷ್ಠೆ ತೋರಿ ಉಪಮುಖ್ಯಮಂತ್ರಿ ಪಟ್ಟಕ್ಕೇರಿದ ಅಜಿತ್ ಪವಾರ್ ಗೆ ಹೊಸ ಸಂಕಷ್ಟ ಎದುರಾಗಿದೆ.
ಇಂದು ಬೆಳಿಗ್ಗೆ ರಾಜಭವನದಲ್ಲಿ ನಡೆದಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಎನ್ ಸಿಪಿ ಶಾಸಕರು ಮಧ್ಯಾಹ್ನದ ಸುದ್ದಿಗೋಷ್ಠಿಯಲ್ಲಿ ಶರದ್ ಪವಾರ್ ಅವರ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು.
‘’ಅಜಿತ್ ಪವಾರ್ ಅವರು ರಾಜಭವನಕ್ಕೆ ಬರಲು ಹೇಳಿದ್ದರು. ಹಾಗಾಗಿ ನಾವು ಹೋಗಿದ್ದೆವು. ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಶರದ್ ಪವಾರ್ ಅವರೇ ನಮ್ಮ ನಾಯಕ’’ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.
ಶಿವಸೇನೆ- ಎನ್ ಸಿಪಿ- ಕಾಂಗ್ರೆಸ್ ಗೆ ಈಗಲೂ 170 ಶಾಸಕರ ಬೆಂಬಲವಿದೆ. ಬಿಜೆಪಿ ಮತ್ತು ಅಜಿತ್ ಬೆಂಬಲಿತ ಎನ್ ಸಿಪಿಗೆ ಬಹುಮತವಿಲ್ಲ. ಅಜಿತ್ ಜೊತೆ 10 ರಿಂದ 12 ಶಾಸಕರಿರಬಹುದು ಎಂದು ಶರದ್ ಪವಾರ್ ಹೇಳಿದರು.
288 ಸಂಖ್ಯಾಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 105 ಶಾಸಕರನ್ನು ಹೊಂದಿದೆ. ಸರಳ ಬಹುಮತಕ್ಕೆ ಇನ್ನೂ ಕನಿಷ್ಟ 40 ಶಾಸಕರ ಬೆಂಬಲ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!