ನೋಟು ಅಮಾನ್ಯ ಪರ-ವಿರೋಧ ರಹಿತ ನಿಲುವು: ಟಿಆರ್ಎಸ್
Team Udayavani, Nov 7, 2017, 7:05 PM IST
ಹೈದರಾಬಾದ್ : ಕೇಂದ್ರದ ನೋಟು ಅಮಾನ್ಯ ಕ್ರಮ ಒಂದು ವರ್ಷ ಪೂರೈಸುವ ಸಂದರ್ಭದಲ್ಲಿ ನಾಳೆ ಬುಧವಾರ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ‘ಕರಾಳ ದಿನ’ವನ್ನು ಆಚರಿಸಲಿವೆ; ವ್ಯತಿರಿಕ್ತವಾಗಿ ಬಿಜೆಪಿ “ಕಾಳಧನ ವಿರೋಧಿ ದಿನ’ವನ್ನು ಆಚರಿಸಲಿದೆ. ಆದರೆ ಒಂದು ಪಕ್ಷ ಮಾತ್ರ ತಟಸ್ಥವಾಗಿ ಉಳಿಯಲು ನಿರ್ಧರಿಸಿದೆ; ಅದೆಂದರೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್).
“ನಾವು ತಟಸ್ಥರು; ಮತ್ತು ನಾವು ಯಾವತ್ತೂ ತಟಸ್ಥರಾಗಿರುವವರು; ಏಕೆಂದರೆ ನಾವು ಎಲ್ಲ ರಾಜಕೀಯ ಪಕ್ಷಗಳೊಂದಿಗೆ ಸಮಾನ ದೂರವನ್ನು ಉಳಿಸಿಕೊಳ್ಳಲು ಬಯಸುತ್ತೇವೆ’ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಲೋಕಸಭಾ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ.
“ವಾಸ್ತವದಲ್ಲಿ ನೋಟು ಅಮಾನ್ಯ ಪ್ರಕೋಪದ ಸಂಕಷ್ಟಕ್ಕೆ ಜನಸಾಮಾನ್ಯರು, ಹಲವರು ದೂರುವಂತೆ, ಅಷ್ಟಾಗಿ ಗುರಿಯಾಗಿಲ್ಲ ಎಂದು ಮುಖ್ಯಮಂತ್ರಿಗಳು ಈ ಹಿಂದೆಯೇ ಹೇಳಿದ್ದರು’ ಎಂದು ಕವಿತಾ ನೆನಪಿಸಿಕೊಟ್ಟರು.
‘ನಾವು, ಅಂದರೆ ಟಿಆರ್ಎಸ್ ಸರಕಾರ, ನೋಟು ಅಮಾನ್ಯ ಪ್ರಕ್ರಿಯೆಯ ಬಗ್ಗೆ ಜನರಲ್ಲಿ ತಿಳಿವಳಿಕೆ ಹುಟ್ಟಿಸುವ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ; ಜವಾಬ್ದಾರಿಯುತ ಸರಕಾರವಾಗಿ ನಮ್ಮಿಂದ ಏನು ಮಾಡಲು ಸಾಧ್ಯವೋ ಅದನ್ನು ನಾವು ಮಾಡಿದ್ದೇವೆ; ನಾವು ನಮ್ಮ ಜನರನ್ನು ಎಚ್ಚರಿಕೆಯಿಂದ ಅವಲೋಕಿಸುತ್ತಿದ್ದೇವೆ ಎಂದು ಕವಿತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ