ಟಿಟಿವಿ ದಿನಕರನ್ ಆಪ್ತರು ವಜಾ
Team Udayavani, Dec 26, 2017, 6:30 AM IST
ಚೆನ್ನೈ: ಎಐಎಡಿಎಂಕೆ ಬಂಡಾಯ ನಾಯಕ, ಶಶಿಕಲಾ ಬಣದ ಟಿಟಿವಿ ದಿನಕರನ್ ಅವರ 9 ಮಂದಿ ಬೆಂಬಲಿಗರನ್ನು ವಜಾ ಮಾಡಿ ತಮಿಳು ನಾಡು ಸರ್ಕಾರ ಸೋಮವಾರ ಆದೇಶ ಹೊರಡಿ ಸಿದೆ. ಮಾಜಿ ಸಿಎಂ ಜಯಲಲಿತಾ ಅವರು ಪ್ರತಿನಿಧಿಸುತ್ತಿದ್ದ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ದಿನಕರನ್ ಎದುರು ಹೀನಾಯ ಸೋಲುಕಂಡ ಬೆನ್ನಲ್ಲೇ ಆಡಳಿತಾರೂಢ ಎಐಎಡಿಎಂಕೆ ಇಂತಹುದೊಂದು ಘೋಷಣೆ ಮಾಡಿದೆ.
ಪಕ್ಷದ ಕರ್ನಾಟಕದ ರಾಜ್ಯ ಘಟಕದ ಮುಖ್ಯಸ್ಥ ಪುಗಳೇಂದಿ ಅವರೂ ಸೇರಿದಂತೆ 9 ಮಂದಿ ಪದಾಧಿಕಾರಿಗಳನ್ನು ವಜಾ ಮಾಡಲಾಗಿದೆ. ಜತೆಗೆ, ಯಾರು ಪಕ್ಷಕ್ಕೆ ದ್ರೋಹ ಬಗೆಯುತ್ತಾರೋ ಅವರಿಗೆ ಎಚ್ಚರಿಕೆಯ ಸಂದೇಶವನ್ನೂ ರವಾನಿಸಲಾಗಿದೆ. ಸೋಮವಾರ ಬೆಳಗ್ಗೆ ಸಿಎಂ ಪಳನಿಸ್ವಾಮಿ ಮತ್ತು ಡಿಸಿಎಂ ಪನ್ನೀರ್ಸೆಲ್ವಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ವೇಳೆ, ತಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಆಡಳಿತಾರೂಢ ಪಕ್ಷಕ್ಕೆ ಯಾವ ಅಧಿಕಾರವಿದೆ ಎಂದು ವಜಾಗೊಂಡ ಪದಾಧಿಕಾರಿಗಳು ಪ್ರಶ್ನಿಸಿದ್ದಾರೆ.
ಜಿಲ್ಲಾ ಕಾರ್ಯದರ್ಶಿಗಳಾದ ಪಿ. ವೆಟ್ರಿವೇಲ್, ಎನ್.ಜಿ. ಪಾರ್ಥಿಬನ್, ಎಂ. ರಂಗಸಾಮಿ, ತಂಗತಮಿಳ್ಸೆಲ್ವಂ ಸೇರಿದಂತೆ ದಿನಕರನ್ಗೆ ಆಪ್ತರಾಗಿರುವ ಎಲ್ಲರನ್ನೂ ಅವರವರ ಹುದ್ದೆ ಯಿಂದ ವಜಾ ಮಾಡಿದ್ದೇವೆ. ಕರ್ನಾಟಕ ರಾಜ್ಯ ಘಟಕದ ಮುಖ್ಯಸ್ಥ ಪುಗಳೇಂದಿ, ವಕ್ತಾರ ನಂಚಿಲ್ ಸಂಪತ್, ಸಿ.ಆರ್. ಸರಸ್ವತಿ ವಿರುದ್ಧವೂ ಇದೇ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಪನ್ನೀರ್ ಹೇಳಿದ್ದಾರೆ. ಆದರೆ, ವಜಾಗೆ ಕಾರಣವೇನೆಂದು ಅವರು ಹೇಳಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ