ರಫೇಲ್ ವಿವಾದಕ್ಕೆ ತಿರುವು; ಪತ್ರಿಕಾ ವರದಿ ಅರ್ಧ ಸತ್ಯ:ನಿರ್ಮಲಾ
Team Udayavani, Feb 8, 2019, 11:49 PM IST
ನವದೆಹಲಿ: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿ ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಮತ್ತೂಂದು ಸುತ್ತಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ‘ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿ ರಫೇಲ್ ಕುರಿತು ಫ್ರಾನ್ಸ್ ಜತೆ ಮಾತುಕತೆ ನಡೆಸುತ್ತಿರುವಾಗಲೇ, ಪ್ರಧಾನಮಂತ್ರಿ ಕಾರ್ಯಾಲಯವು ‘ಪರ್ಯಾಯ ಮಾತುಕತೆ’ ನಡೆಸುತ್ತಿತ್ತು. ಈ ಮೂಲಕ ವಿಮಾನದ ದರ ನಿಗದಿ ವೇಳೆ ಪಿಎಂಒ ಹಸ್ತಕ್ಷೇಪ ಮಾಡಿತ್ತು. ಇದಕ್ಕೆ ಅಂದಿನ ರಕ್ಷಣಾ ಕಾರ್ಯದರ್ಶಿ ಜಿ.ಮೋಹನ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು’ ಎಂಬ ವರದಿ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಇದನ್ನೇ ಅಸ್ತ್ರವಾಗಿಟ್ಟುಕೊಂಡು ಶುಕ್ರವಾರ ಸರ್ಕಾರವನ್ನು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.
ನಿರ್ಮಲಾ ತಿರುಗೇಟು: ಮೋದಿ ದೇಶದ ರಕ್ಷಣಾ ವ್ಯವಸ್ಥೆಯನ್ನೇ ನಾಶ ಮಾಡುತ್ತಿದ್ದಾರೆ ಎಂದು ಲೋಕಸಭೆಯಲ್ಲಿ ಆರೋಪಿಸಿರುವ ಪ್ರತಿಪಕ್ಷಗಳು, ಮೋದಿ ಕೂಡಲೇ ರಾಜೀನಾಮೆ ನೀಡಬೇಕು, ಪ್ರಕರಣದ ತನಿಖೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿವೆ. ಪ್ರತಿಪಕ್ಷಗಳ ಕೋಲಾಹಲ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಮುಗಿದುಹೋದ ವಿಷಯವನ್ನಿಟ್ಟುಕೊಂಡು ಸುಖಾಸುಮ್ಮನೆ ಎಳೆದಾಡಲಾಗುತ್ತಿದೆ. ಮಾಧ್ಯಮ ವರದಿಯು ರಕ್ಷಣಾ ಕಾರ್ಯದರ್ಶಿಯ ಆಕ್ಷೇಪವನ್ನು ಮಾತ್ರ ಪ್ರಕಟಿಸಿದೆ. ಅವರ ಆಕ್ಷೇಪಕ್ಕೆ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ನೀಡಿದ್ದ ಪ್ರತಿಕ್ರಿಯೆ ಪ್ರಕಟಿಸಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.
ಅಂದು ಪರ್ರಿಕರ್ ಪ್ರತಿಕ್ರಿಯೆ ನೀಡಿ, ‘ಪಿಎಂಒ, ಫ್ರಾನ್ಸ್ ಅಧ್ಯಕ್ಷರ ಕಚೇರಿಯು ಒಪ್ಪಂದದ ಪ್ರಗತಿ ಪರಿಶೀಲಿಸುತ್ತಿರುವಂತೆ ಕಾಣುತ್ತಿದೆ. ನೀವು ಕೂಲ್ ಆಗಿರಿ. ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿ ವಿವಾದ ಪರಿಹರಿಸಿಕೊಳ್ಳಿ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ