ಧರ್ಮದ ಬಗ್ಗೆ ಟ್ವೀಟ್‌ ಮಾಡಿ ಟೀಕೆಗೆ ಗುರಿಯಾದ ಸೋನು ನಿಗಮ್‌


Team Udayavani, Apr 18, 2017, 3:45 AM IST

sonu-nigam.jpg

ಮುಂಬೈ: ಭಿಕ್ಷುಕನಂತೆ ಬಟ್ಟೆ ಧರಿಸಿ ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಹಾರ್ಮೋನಿಯಂ ಹಿಡಿದು ಹಾಡುತ್ತಾ ಜನರಿಂದ ಭೇಷ್‌ ಎನಿಸಿಕೊಳ್ಳುತ್ತಿದ್ದ, ಬಹುತೇಕ ಬಾರಿ ಒಳ್ಳೆ ಕಾರಣಗಳಿಗಾಗೇ ಸುದ್ದಿಯಲ್ಲಿರುತ್ತಿದ್ದ ಖ್ಯಾತ ಗಾಯಕ ಸೋನು ನಿಗಮ್‌, ಈಗ ಧಾರ್ಮಿಕ ಆಚರಣೆ ವಿರೋಧಿಸಿ ಸರಣಿ ಟ್ವೀಟ್‌ ಮಾಡುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಧಾರ್ಮಿಕ ಕೇಂದ್ರಗಳಲ್ಲಿ ಬೆಳಗಿನ ಹೊತ್ತು ಪ್ರಾರ್ಥನೆ ಮಾಡುವಾಗ ಧ್ವನಿವರ್ಧಕ ಬಳಸುವುದನ್ನು ಖಂಡಿಸಿ ಸೋನು ಒಂದರ ಹಿಂದೆ ಒಂದು ಮೂರು ಟ್ವೀಟ್‌ ಮಾಡಿದ್ದಾರೆ. “ದೇವರು ಎಲ್ಲರಿಗೂ ಒಳಿತು ಮಾಡಲಿ. ನಾನು ಮುಸ್ಲಿಂ ಅಲ್ಲ. ಆದರೆ ದಿನಾ ಬೆಳಗ್ಗೆ ಅಝಾನ್‌(ಮುಸ್ಲಿಂ ಪ್ರಾರ್ಥನೆ) ನನ್ನನ್ನು ಎಚ್ಚರಿಸುತ್ತದೆ. ಇಂಥ ಒತ್ತಾಯದ ಧಾರ್ಮಿಕತೆ ನಿಲ್ಲುವುದೆಂದು? ‘ ಎಂಬುದು ಸೋನು ನಿಗಮ್‌ ಮಾಡಿದ ಮೊದಲು ಟ್ವೀಟ್‌.

ಕೆಲವೇ ನಿಮಿಷಗಳಲ್ಲಿ ಮತ್ತೂಂದು ಟ್ವೀಟ್‌ ಮಾಡಿದ ಸೋನು, “ಅಂದ ಹಾಗೆ ಮೊಹಮ್ಮದ್‌ ಅವರು ಇಸ್ಲಾಂ ಸ್ಥಾಪಿಸಿದಾಗ ವಿದ್ಯುತ್‌ ಸೌಲಭ್ಯ ಇರಲಿಲ್ಲ. ಆದರೆ ಎಡಿಸನ್‌ನ ನಂತರ ನನಗೇಕೆ ಈ ಸದ್ದು ಕೇಳುವ ಗತಿ ಬಂದಿದೆ?’ ಎಂದಿದ್ದಾರೆ. ಮತ್ತೂ ಮುಂದುವರಿದ ಸೋನು, “ವಿದ್ಯುತ್‌ ಬಳಸಿಕೊಂಡು, ಧರ್ಮವನ್ನು ಪ್ರತಿಪಾದಿಸದ ಜನರ ನಿದ್ದೆ ಕೆಡಿಸುವ ಯಾವುದೇ ದೇವಾಲಯ ಅಥವಾ ಗುರುದ್ವಾರದ ಮೇಲೆ ನನಗೆ ನಂಬಿಕೆಯಿಲ್ಲ. ಮತ್ತೇಕೆ..? ಪ್ರಾಮಾಣಿಕ? ಸತ್ಯ?” ಎಂದು ಮೂರನೇ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನೆಚ್ಚಿನ ಗಾಯಕನ ಈ ಟ್ವೀಟ್‌ಗಳಿಂದ ಮನನೊಂದ ಕೆಲ ಅಭಿಮಾನಿಗಳು “ಸೋನು ನಿಗಮ್‌ ಪಾಕಿಸ್ತಾನಕ್ಕೆ ಹೋಗಲಿ. ಅಲ್ಲಿ ಕರೆಂಟ್‌ ಇಲ್ಲ ಹೀಗಾಗಿ ಬೆಳಗ್ಗೆ ಧ್ವನಿವರ್ಧಕಗಳು ಅವರ ನಿದ್ದೆ ಕೆಡಿಸಲಾರವು,’ ಎಂದು ರೀಟ್ವೀಟ್‌ ಮಾಡಿದ್ದಾರೆ. ಸೋನು ಅವರ ಈ ಅಭಿಪ್ರಾಯವನ್ನು ಕೆಲ ಬಾಲಿವುಡ್‌ ಗಾಯಕರು ಸ್ವಾಗತಿಸಿದ್ದಾರೆ. ಶಾನ್‌, ರಾಹುಲ್‌ ರಾಮ್‌, ಕೈಲಾಶ್‌ ಖೇರ್‌ ಮತ್ತಿತರರು ಸೋನು ಬೆಂಬಲಕ್ಕೆ ನಿಂತರೆ, ಬಾಬಾ ಸೆಹಗಲ್‌, ಸೋನಾ ಮಹಾಪಾತ್ರ ಮತ್ತಿತರರು ಸೋನು ನಿಗಮ್‌ ಹೀಗೆ ಹೇಳಬಾರದಿತ್ತು ಎಂದಿದ್ದಾರೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.