ಒಂದು ವಾರದ ಬಳಿಕ ರಾಹುಲ್ ಗಾಂಧಿ ಟ್ವಿಟರ್ ಖಾತೆ “ಅನ್ ಲಾಕ್”; ಸತ್ಯಮೇವ ಜಯತೇ ಎಂದ ಕಾಂಗ್ರೆಸ್
ಹೊಸ ಐಟಿ ಕಾಯ್ದೆಯನ್ನು ಉಲ್ಲಂಘಿಸಿದಂತಾಗಿದೆ ಎಂದು ಟ್ವಿಟರ್ ಕ್ರಮ ತೆಗೆದುಕೊಂಡಿತ್ತು.
Team Udayavani, Aug 14, 2021, 12:34 PM IST
ನವದೆಹಲಿ: ಅತ್ಯಾಚಾರಕ್ಕೊಳಗಾಗದ ಬಾಲಕಿಯ ಮನೆಯವರ ಫೋಟೊ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ಸಸ್ಪೆಂಡ್ ಮಾಡಿದ್ದ ಒಂದು ವಾರದ ನಂತರ ರಾಹುಲ್ ಖಾತೆಯನ್ನು ಶನಿವಾರ (ಆಗಸ್ಟ್ 14) ಅನ್ ಲಾಕ್ ಮಾಡಿದೆ.
ಇದನ್ನೂ ಓದಿ: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಚರ್ಚೆ ಬೇಡ: ಹಾಲಪ್ಪ ಆಚಾರ್
“ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ಮುಖಂಡರ ಟ್ವಿಟರ್ ಖಾತೆಯನ್ನು ಅನ್ ಲಾಕ್ ಮಾಡಲಾಗಿದೆ. ಆದರೆ ರದ್ದು ಮಾಡಿದ್ದ ಟ್ವಿಟರ್ ಖಾತೆಯನ್ನು ಪುನಃ ಅನ್ ಲಾಕ್ ಮಾಡಿರುವುದಕ್ಕೆ ಟ್ವಿಟರ್ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ “ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯ ರೋಹನ್ ಗುಪ್ತಾ ಎನ್ ಡಿಟಿವಿಗೆ ತಿಳಿಸಿದ್ದಾರೆ. ರಾಹುಲ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರ ಖಾತೆಯನ್ನು ಅನ್ ಲಾಕ್ ಮಾಡಿರುವುದಕ್ಕೆ ಸತ್ಯಮೇವ ಜಯತೇ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಟ್ವಿಟರ್ ತಮ್ಮ ಖಾತೆಯನ್ನು ಡಿಲೀಟ್ ಮಾಡಿಲ್ಲ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿದೆ. ಅತ್ಯಾಚಾರಕ್ಕೊಳಗಾಗದ ಬಾಲಕಿಯ ಮನೆಯವರ ಫೋಟೊವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿರುವುದು ಹೊಸ ಐಟಿ ಕಾಯ್ದೆಯನ್ನು ಉಲ್ಲಂಘಿಸಿದಂತಾಗಿದೆ ಎಂದು ಟ್ವಿಟರ್ ಕ್ರಮ ತೆಗೆದುಕೊಂಡಿತ್ತು.
ತಮ್ಮ ಟ್ವಿಟರ್ ಖಾತೆಯನ್ನು ರದ್ದುಪಡಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ರಾಹುಲ್ ಗಾಂಧಿ, ಭಾರತದ ರಾಜಕೀಯ ವಿದ್ಯಮಾನಗಳಲ್ಲಿ ಟ್ವಿಟರ್ ಹಸ್ತಕ್ಷೇಪ ಮಾಡುತ್ತಿದೆ. ನನ್ನ ಟ್ವಿಟರ್ ಖಾತೆ ವಿರುದ್ಧ ಕ್ರಮ ತೆಗೆದುಕೊಳ್ಳುವ ಮೂಲಕ ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ತಂದಿರುವುದಾಗಿ ಆಕ್ಷೇಪಿಸಿದ್ದರು. ತಮ್ಮ ಈ ಹೇಳಿಕೆಯನ್ನು ಯೂ ಟ್ಯೂಬ್ ಮೂಲಕ ಬಿಡುಗಡೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ