ತ್ರಿಕೋನ ಪ್ರೇಮ : 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಸಜೀವ ದಹನ
Team Udayavani, Oct 1, 2018, 12:37 PM IST
ಹೈದರಾಬಾದ್ : ಒಂದೇ ಹುಡುಗಿಯನ್ನು ಪ್ರೀತಿಸಿದ ಹತ್ತನೇ ತರಗತಿಯ ಇಬ್ಬರು ಹುಡುಗರು ಕ್ರೋಧದ ಆವೇಶದಲ್ಲಿ , ಮದ್ಯ ಸೇವಿಸಿ, ಪರಸ್ಪರ ಬೆಂಕಿ ಹಚ್ಚಿಕೊಂಡು ಸಜೀವ ದಹನಗೊಂಡ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಒಂದೇ ಹುಡುಗಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ ಇಬ್ಬರು ಹದಿನಾರರ ಹರೆಯದ ವಿದ್ಯಾರ್ಥಿಗಳು ಪರಸ್ಪರರನ್ನು ಜೀವಂತ ಸುಟ್ಟು ಕೊಂದ ಘಟನೆ ಇಲ್ಲಿಂದ 190 ಕಿ.ಮೀ. ದೂರದ ತೆಲಂಗಾಣದ ಜಗ್ತಿಯಾಲ್ ಪಟ್ಟಣದಲ್ಲಿ ನಡೆದಿದೆ.
ಬೆಂಕಿ ಹಚ್ಚಲ್ಪಟ್ಟವರಲ್ಲಿ ಕೆ ಮಹೇಂದರ್ ಎಂಬ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮಡಿದರೆ ಇನ್ನೋರ್ವ ರವಿ ತೇಜ ಎಂಬ ವಿದ್ಯಾರ್ಥಿ ಗಂಭೀರ ಸುಟ್ಟಗಾಯಗೊಂಡಿದಿಗೆ ಆಸ್ಪತ್ರೆಗೆ ದಾಖಲಾಗಿ ಅಲ್ಲಿ ಕೊನೆಯುಸಿರೆಳೆದ.
ಮೃತಪಟ್ಟಿರುವ ಈ ಇಬ್ಬರೂ ಹುಡುಗರ ಮನೆಯವರು ಹೇಳಿರುವ ಪ್ರಕಾರ ಈ ಘಟನೆ ನಡೆದಾಗ ಸ್ಥಳದಲ್ಲಿ ಮೂರನೇ ಹುಡುಗನೊಬ್ಬ ಇದ್ದ ಎಂದು ಗೊತ್ತಾಗಿದೆ. ಹಾಗಾಗಿ ಈ ಇಡಿಯ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ. ಪೊಲೀಸರು ಈ ಪ್ರಕರಣವನ್ನು ಭಿನ್ನ ಕೋನದಿಂದಲೂ ತನಿಖೆ ನಡೆಸುತ್ತಿದ್ದಾರೆ.
ಪೊಲೀಸರಿಗೆ ಘಟನೆ ನಡೆದ ಸ್ಥಳದಲ್ಲಿ ಬಿಯರ್ ಬಾಟಲ್, ಮೊಬೈಲ್ ಫೋನ್ಗಳು ಸಿಕ್ಕಿವೆ.
ಮಿಷನರಿ ಶಾಲೆಯೊಂದರಲ್ಲಿ ಮಹೇಂದರ್ ಮತ್ತು ರವಿ ಸಹಪಾಠಿಗಳಾಗಿದ್ದು ಅವರು ಅದೇ ಶಾಲೆಯ ಒಬ್ಬಳೇ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದರು. ಈ ತ್ರಿಕೋನ ಪ್ರೇಮವೇ ಎರಡು ಜೀವಗಳನ್ನು ಬಲಿ ಪಡೆಯಿತು ಎಂದು ಪೊಲೀಸರು ಹೇಳಿದ್ದಾರೆ.
ಹುಡುಗಿಗಾಗಿ ನಡೆದ ಜಟಾಪಟಿಯಲ್ಲಿ ಇಬ್ಬರೂ ಹುಡುಗರು ಪರಸ್ಪರರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಹಾಗಿದ್ದರೂ ಇದು ಕೊಲೆಯೇ ಆತ್ಮಹತ್ಯೆಯೇ ಎಂಬುದು ಖಚಿತವಾಗಿಲ್ಲ; ಹಾಗಾಗಿ ಪೊಲೀಸರು ಎರಡೂ ಕೋನಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್