25,000 ರೂ. ಲಂಚ: ಪಿಎಫ್ ಇಲಾಖೆಯ ಇಬ್ಬರು ಅಧಿಕಾರಿ ಸೆರೆ
Team Udayavani, Nov 9, 2017, 3:41 PM IST
ಕೋಟ, ರಾಜಸ್ಥಾನ : ಖಾಸಗಿ ಭದ್ರತಾ ಸಂಸ್ಥೆಯ ಮಾಲಕನಿಂದ 25,000 ರೂ. ಲಂಚ ತೆಗೆದುಕೊಂಡ ಆರೋಪದ ಮೇಲೆ ಭವಿಷ್ಯ ನಿಧಿ ಇಲಾಖೆಯ ಇಬ್ಬರು ಜಾರಿ ಅಧಿಕಾರಿ (ಇನ್ಸ್ಪೆಕ್ಟರ್) ಗಳನ್ನು ಭ್ರಷ್ಟಾಚಾರ ನಿಗ್ರಹ ದಳದವರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಬಂಧಿತರನ್ನು ನಳಿನ್ ಕುಮಾರ್ ಭಟ್ ಮತ್ತು ಸುರೇಶ್ ಸೈನಿ ಎಂದು ಗುರುತಿಸಲಾಗಿದೆ. ಇವರ ನಗರದ ಕಾನ್ಸುವಾ ಪ್ರದೇಶದಲ್ಲಿ ಖಾಸಗಿ ಭದ್ರತಾ ಸಂಸ್ಥೆ ನಡೆಸುತ್ತಿರುವ ಗೋಬ್ರಿ ಲಾಲ್ ಎಂಬವರಿಂದ 25,000 ರೂ. ಲಂಚ ತೆಗೆದುಕೊಳ್ಳುವಾಗ ಬಂಧಿಸಲ್ಪಟ್ಟರು ಎಂದು ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ (ಎಸಿಬಿ) ಚಂದ್ರಶೀಲ್ ಠಾಕೂರ್ ತಿಳಿಸಿದ್ದಾರೆ.
ಬಂಧಿತ ಅಧಿಕಾರಿಗಳನ್ನು ಎಸಿಬಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದಿರುವ ಠಾಕೂರ್, ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಕೇಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ