ಪುಣೆ ಕೊಳೆಗೇರಿಯಲ್ಲಿ ಅಗ್ನಿ ದುರಂತ: ಇಬ್ಬರ ದಾರುಣ ಸಾವು
Team Udayavani, Oct 25, 2018, 12:23 PM IST
ಪುಣೆ, ಮಹಾರಾಷ್ಟ್ರ : ಇಲ್ಲಿನ ಕೊಳೇಗೇರಿಯೊಂದರಲ್ಲಿ ಇಂದು ಗುರುವಾರ ನಸುಕಿನ ವೇಳೆ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ನಗರ ಹೊರವಲಯದ ಪಿಂಪ್ರಿ ಚಿಂಚವಾಡ ಪ್ರದೇಶದಲ್ಲಿನ ದಳವಿನಗರದಲ್ಲಿರುವ ಈ ಕೊಳೆಗೇರಿಯ ಗುಡಿಸಲೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡದ್ದೇ ಅಗ್ನಿ ಅನಾಹುತಕ್ಕೆ ಕಾರಣವಾಯಿತು. ಪರಿಣಾಮವಾಗಿ ಬೆಂಕಿಯ ಜ್ವಾಲೆಗಳು ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಇತರ ಐದು ಗುಡಿಸಲುಗಳಿಗೂ ಹಬ್ಬಿಕೊಂಡವು.
ದುರಂತದಲ್ಲಿ ಮೃತಪಟ್ಟಿರುವ ಇಬ್ಬರನ್ನು ಪ್ರದೀಪ್ ಮೋಟೆ (38) ಮತ್ತು ಶಂಕರ ಕ್ಷೀರಸಾಗರ್ (35) ಎಂದು ಗುರುತಿಸಲಾಗಿದೆ.
ಅಗ್ನಿ ದುರಂತದ ಸುದ್ದಿ ತಿಳಿದೊಡನೆಯೇ ಅಗ್ನಿ ಶಾಮಕಗಳು ಧಾವಿಸಿ ಬಂದು ಬೆಂಕಿ ನಂದಿಸಿವೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು