ಪ್ರತೀಕಾರ-ಬ್ಯಾಂಕ್ ಮ್ಯಾನೇಜರ್ ಹತ್ಯೆಗೈದ ಉಗ್ರ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಸಾವು
ಮಂಗಳವಾರವೂ ಶ್ರೀನಗರದಲ್ಲಿ ಎಲ್ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿತ್ತು.
Team Udayavani, Jun 15, 2022, 9:28 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಬುಧವಾರ ಹತ್ಯೆಗೈಯಲಾಗಿದೆ.
ಇತ್ತೀಚೆಗೆ ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರರು, ಶೋಪಿಯಾನ್ನ ಕಂಜಿಯುಲಾರ್ನಲ್ಲಿ ಪ್ರದೇಶದಲ್ಲಿ ಅಡಗಿರುವ ಬಗೆಗಿನ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.
ಹತ್ಯೆಯಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಶೋಪಿಯಾನ್ನ ಜಾನ್ ಮೊಹಮ್ಮದ್ ಲೋನ್ ಎಂದು ಗುರುತಿಸಲಾಗಿದೆ. ಇತರ ಭಯೋತ್ಪಾದಕ ಅಪರಾಧಗಳ ಜೊತೆಗೆ, ಅವರು ಕುಲ್ಗಾಮ್ ಜಿಲ್ಲೆಯಲ್ಲಿ ಜೂ. 6 ರಂದು ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಹೊಸಪೇಟೆ: ಲಾರಿಗೆ ಬಸ್ ಢಿಕ್ಕಿಯಾಗಿ 11 ಜನರಿಗೆ ಗಾಯ
ಮಂಗಳವಾರವೂ ಶ್ರೀನಗರದಲ್ಲಿ ಎಲ್ಇಟಿಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿತ್ತು. ಈ ವೇಳೆ ಓರ್ವ ಪೊಲೀಸ್ ಪೇದೆಯೂ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಭಯೋತ್ಪಾದಕರನ್ನು ಪಾಕಿಸ್ತಾನಿ ಹ್ಯಾಂಡ್ಲರ್ಗಳು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ