ಕಾಶ್ಮೀರಿ ಪಂಡಿತ ರಾಹುಲ್ ರನ್ನು ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರರಿಬ್ಬರ ಎನ್‌ಕೌಂಟರ್‌

ಲತೀಫ್ ಸೇರಿದಂತೆ ಮೂವರು ಉಗ್ರರನ್ನು ಸುತ್ತುವರಿದ ಭದ್ರತಾ ಪಡೆಗಳು

Team Udayavani, Aug 10, 2022, 5:21 PM IST

army

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೈಬಾ (ಎಲ್‌ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ.

ಮೇ ತಿಂಗಳಲ್ಲಿ ಕಾಶ್ಮೀರಿ ಪಂಡಿತ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲತೀಫ್ ರಾಥರ್ ಸೇರಿದಂತೆ ಮೂವರು ಎಲ್‌ಇಟಿ ಭಯೋತ್ಪಾದಕರು ಎನ್‌ಕೌಂಟರ್ ಸ್ಥಳದಲ್ಲಿ ಸಿಕ್ಕಿಬಿದ್ದಿದ್ದು, ಇಬ್ಬರನ್ನು ಇದುವರೆಗೆ ಕೊಲ್ಲಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೇಲ್‌ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ವಕ್ತಾರರು ವಿವರಗಳನ್ನು ನೀಡಿದ್ದಾರೆ.

ಅಡಗಿದ್ದ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದು, ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್ ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ.

2010-11ರಲ್ಲಿ ವಲಸಿಗರಿಗೆ ವಿಶೇಷ ಉದ್ಯೋಗದ ಪ್ಯಾಕೇಜ್ ಅಡಿಯಲ್ಲಿ ಗುಮಾಸ್ತ ಹುದ್ದೆ ಪಡೆದಿದ್ದ ರಾಹುಲ್ ಭಟ್ ಅವರನ್ನು ಮೇ 12 ರಂದು ಬುದ್ಗಾಮ್‌ನ ಚದೂರ ಪಟ್ಟಣದ ತಹಸಿಲ್ ಕಚೇರಿಯೊಳಗೆ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿದ್ದರು.ಕೆಲವು ದಿನಗಳ ನಂತರ, ಟಿವಿ ಕಲಾವಿದೆ ಅಮರೀನ್ ಭಟ್ ಅವರನ್ನು ಎಲ್‌ಇಟಿ ಭಯೋತ್ಪಾದಕರು ಚದೂರದಲ್ಲಿರುವ ಅವರ ಮನೆಯೊಳಗೆ ಗುಂಡಿಕ್ಕಿ ಕೊಂದಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.