ಮಂದ್ ಸೌರ್ 8 ವರ್ಷದ ಬಾಲಕಿ ಮೇಲೆ ರೇಪ್; ಇಬ್ಬರಿಗೆ ಮರಣದಂಡನೆ ಶಿಕ್ಷೆ
Team Udayavani, Aug 21, 2018, 4:54 PM IST
ಮಂದ್ ಸೌರ್(ಮಧ್ಯಪ್ರದೇಶ): ಮಂದ್ ಸೌರ್ ನಲ್ಲಿ 8 ವರ್ಷದ ಬಾಲಕಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ಎಸಗಿದ್ದ ಇಬ್ಬರಿಗೆ ವಿಶೇಷ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಹೊಸದಾಗಿ ಸೇರಿಸಲ್ಪಟ್ಟ ಐಪಿಸಿ ಸೆಕ್ಷನ್ 376ಡಿಬಿ( ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಜನರು 12ವರ್ಷದೊಳಗಿನ ಬಾಲಕಿಯರ ಮೇಲೆ ನಡೆಸುವ ಅತ್ಯಾಚಾರಕ್ಕೆ ವಿಧಿಸುವ ಶಿಕ್ಷೆ) ಅನ್ವಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ನಿಶಾ ಗುಪ್ತ್ ಅವರು, ಆರೋಪಿ ಇರ್ಫಾನ್ ಅಲಿಯಾಸ್ ಭಾಯು(20ವರ್ಷ) ಹಾಗು ಅಸೀಫ್ ದೋಷಿ ಎಂದು ಘೋಷಿಸಿ, ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎಸ್ ಥಾಕೂರ್ ತಿಳಿಸಿದ್ದಾರೆ.
ಜೂನ್ 26ರಂದು ಮಂದ್ ಸೌರ್ ನಲ್ಲಿ ಶಾಲೆಯ ಹೊರಭಾಗದಲ್ಲಿ ತಂದೆಯ ಬರುವಿಕೆಗಾಗಿ ಕಾಯುತ್ತಿದ್ದ ವೇಳೆ ಆರೋಪಿಗಳು ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಳಿಕ ಆಕೆಯ ಗಂಟಲು ಸೀಳಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಬಾಲಕಿಯ ದೇಹವನ್ನು ನಿರ್ಜನ ಸ್ಥಳದಲ್ಲಿ ಎಸೆದಿದ್ದರು.
ಆದರೆ ಬಾಲಕಿ ಬದುಕುಳಿದಿದ್ದು ಇಂದೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿಯ ಮೈಮೇಲೆ ಹಲವಾರು ಗಾಯಗಳಾಗಿದ್ದು, ಮೂಗಿಗೆ ಬಲವಾದ ಏಟು ಬಿದ್ದಿದೆ. ಆಕೆಯ ಗುಪ್ತಾಂಗಕ್ಕೆ ವಸ್ತುವಿನಿಂದ ಗಾಯಗೊಳಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಘಟನೆ ಮಂದ್ ಸೌರ್ ನಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಯಿತು. ಬೀದಿಯಲ್ಲಿ ಮೆರವಣಿಗೆ ನಡೆಸಿ ಶಾಲೆ, ಕಾಲೇಜು, ಮಾರುಕಟ್ಟೆಯನ್ನು ಬಂದ್ ಮಾಡಿ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡುವಂತೆ ಪ್ರತಿಭಟನಾಕಾರರು ಬೇಡಿಕೆ ಇಟ್ಟಿದ್ದರು.
ಕೋರ್ಟ್ ನೀಡಿರುವ ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಅತ್ಯಾಚಾರಿಗಳು ಭೂಮಿಗೆ ಭಾರ ಮತ್ತು ಅವರು ಜೀವಿಸಲು ಅನರ್ಹರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ