ಸೇನಾಪಡೆ ಗುಂಡಿಗೆ ಇಬ್ಬರು ಉಗ್ರರು ಬಲಿ: ಮಹಾರಾಷ್ಟ್ರ ಎಟಿಎಸ್ ನಿಂದ ಓರ್ವನ ಬಂಧನ
ಸೋಪುರ್ ನಲ್ಲಿ ತಪ್ಪಿಸಿಕೊಂಡಿದ್ದ ಪಾಕ್ ಮೂಲದ ಉಗ್ರನ ಹತ್ಯೆ
Team Udayavani, Jun 14, 2022, 1:08 PM IST
ನವದೆಹಲಿ: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳವು ಉಗ್ರ ಸಂಘಟನೆಗೆ ನೇಮಕಾತಿ ಮತ್ತು ಧನಸಹಾಯ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಬಂಧಿಸಿದೆ ಎಂದು ಎಟಿಎಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಂಗಳವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದರೊಂದಿಗೆ, ಮಹಾರಾಷ್ಟ್ರ ಎಟಿಎಸ್ ಈ ವರ್ಷದ ಮೇ ತಿಂಗಳಿನಿಂದ ಇದುವರೆಗೆ ನಾಲ್ವರನ್ನು ಬಂಧಿಸಿದೆ.
ಬಂಧಿತ ಆರೋಪಿ, ಮೇ 24 ರಂದು ಬಂಧನಕ್ಕೊಳಗಾದ ಎಲ್ ಇ ಟಿ ಉಗ್ರರ ನಂಟು ಹೊಂದಿದ್ದ ಜುನೈದ್ ಮೊಹಮ್ಮದ್ ಎಂಬಾತನಿಗೆ ಹಣ ವರ್ಗಾಯಿಸಿದ್ದ ಎಂದು ತಿಳಿದು ಬಂದಿದೆ.
ಪಾಕ್ ಉಗ್ರ ಸೇರಿ ಇಬ್ಬರ ಹತ್ಯೆ
ಶ್ರೀನಗರದಲ್ಲಿ ಬೆಮಿನಾ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ನಡೆದಿದ್ದು,ಎಲ್ಇಟಿಯ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹತ್ಯೆಗೀಡಾದ ಉಗ್ರರು ಪಾಕಿಸ್ಥಾನದ ಫೈಸಲಾಬಾದ್ ನಿವಾಸಿ ಅಬ್ದುಲ್ಲಾ ಗೌಜ್ರಿ ಮತ್ತು ಅನಂತನಾಗ್ ಜಿಲ್ಲೆಯ ನಿವಾಸಿ ಆದಿಲ್ ಹುಸೇನ್ ಮಿರ್ ಅಲಿಯಾಸ್ ಸುಫಿಯಾನ್ ಎಂದು ಗುರುತಿಸಲಾಗಿದೆ.
ಸೋಪುರ್ ನಲ್ಲಿ ನಡೆದಿದ್ದ ಎನ್ ಕೌಂಟರ್ ವೇಳೆ ಈ ಇಬ್ಬರು ತಪ್ಪಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : 10ನೇ ತರಗತಿ ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಆದ ವಿದ್ಯಾರ್ಥಿ ಈಗ ಐಎಎಸ್ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ