ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿದ ಮುಸ್ಲೀಂ ಸಹೋದರರು!
Team Udayavani, Apr 20, 2021, 2:15 PM IST
ತೆಲಂಗಾಣ : ಕೋವಿಡ್ ನಿಂದ ಮೃತ ಪಟ್ಟ ಹಿಂದೂ ವ್ಯಕ್ತಿಯ ಅಂತ್ಯ ಕ್ರಿಯೆಯನ್ನು ಮುಸ್ಲೀಂ ಸಮುದಾಯದ ಇಬ್ಬರು ಸಹೋದರರು ನಡೆಸಿಕೊಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ಘಟನೆಯು ತೆಲಂಗಾಣದ ಪೆಡ್ಡಾ ಕೊಡಪಾಗಲ್ ಮಂಡಲದ ಕೇಟೆಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ.
ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯನ್ನು ಮೊಘುಲಿಯಾ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.. ನಂತರ ಇವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದು ಇವರನ್ನು ಭನಸುವಾಡದ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ಕೊಡಿಸಲಾಗಿದೆ. ಆದರೂ ಕೂಡ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೊಘುಲಿಯಾ ಸಾವನ್ನಪ್ಪಿದ್ದಾರೆ.
ಕೋವಿಡ್ ಸೋಂಕು ತಗುಲಿ ಮೊಘುಲಿಯಾ ಸಾವನ್ನಪ್ಪಿದ್ದರಿಂದ ಕುಟುಂಬದವರು ಅವರ ಮೃತ ದೇಹವನ್ನು ಆಸ್ಪತ್ರೆಯಿಂದ ಕೊಂಡೊಯ್ಯಲು ಮತ್ತು ಅಂತಿಮ ಸಂಸ್ಕಾರ ಮಾಡಲು ಮುಂದಾಗಲಿಲ್ಲ. ಇವರು ಕೋವಿಡ್ ಗೆ ಹೆದರಿ ಅಂತ್ಯ ಸಂಸ್ಕಾರಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯ ಮೂಲಗಳು ತಿಳಿಸಿದೆ.
ಇದನ್ನು ಕಂಡ ಶಫಿ ಮತ್ತು ಅಲಿ ಎಂಬ ಇಬ್ಬರು ಮುಸಲ್ಮಾನ ಬಾಂಧವರು ಮೊಘುಲಿಯಾ ಅವರ ಮೃತ ದೇಹವನ್ನು ಭನಸುವಾಡ ಪ್ರದೇಶದಲ್ಲಿ ಹಿಂದೂ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ. ಶಫಿ ಮತ್ತು ಅಲಿ ಈ ಇಬ್ಬರಿಗೂ ಮತ್ತು ಮೊಘುಲಿಯಾಗು ಯಾವುದೇ ರಕ್ತ ಸಂಬಂಧ ಇಲ್ಲ. ಆದ್ರೆ ಮಾನವೀಯ ದೃಷ್ಟಿಯಿಂದ ಮಾಡಿರುವ ಈ ಕೆಲಸ ಮೆಚ್ಚುಗೆಗೆ ಕಾರಣವಾಗುತ್ತಿದೆ.
ಇವರ ಕಾರ್ಯಕ್ಕೆ ಸ್ಥಳೀಯರು ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಇಬ್ಬರು ಸಹೋದರರ ನಿಸ್ವಾರ್ಥ ಕೆಲಸವನ್ನು ಶ್ಲಾಘಿಸಿದ್ದು, ಕೋಮು ಸೌಹಾರ್ದತೆ ಮೆರೆದಿರುವ ಈ ಇಬ್ಬರು ಸಹೋದರರ ಬಗ್ಗೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್