ತ್ರಿಪುರಾ:ಮಕ್ಕಳ ಕಳ್ಳರೆಂದು ಶಂಕಿಸಿ ದಾಳಿ;ಇಬ್ಬರ ಹತ್ಯೆ,ಮೂವರು ಗಂಭೀರ
Team Udayavani, Jun 29, 2018, 10:13 AM IST
ಅಗರ್ತಲಾ: ದೇಶಾದ್ಯಂತ ಮಕ್ಕಳ ಕಳ್ಳರ ವದಂತಿ ವ್ಯಾಪಕವಾಗಿರುವ ವೇಳೆಯಲ್ಲಿ ತ್ರಿಪುರಾದಲ್ಲಿ ಗುರುವಾರ 2 ಪ್ರತ್ಯೇಕ ಕಡೆಗಳಲ್ಲಿ ಗುಂಪು ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಶ್ಚಿಮ ತ್ರಿಪುರಾದ ಮುರಾಬರಿ ಪ್ರದೇಶದಲ್ಲಿ ಒಂದು ಘಟನೆ ನಡೆದಿದ್ದು, ಇನ್ನೊಂದು ಘಟನೆ ಕಾಲಚೇರಾ ಪ್ರದೇಶದಲ್ಲಿ ನಡೆದಿದೆ.
ನಾಲ್ವರು ಶಂಕಿತರ ಮೇಲೆ ಉದ್ರಿಕ್ತರು ದಾಳಿ ನಡೆಸಿದ್ದು, ತಡೆಯಲು ಹೋದ ಪೊಲೀಸ್ ಸಿಬಂದಿಯ ಮೇಲೂ ದಾಳಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಮೂವರು ಬಟ್ಟೆ ವ್ಯಾಪಾರಿಗಳ ಮೇಲೆ ಗುಂಪು ದಾಳಿ ನಡೆದಿದ್ದು, ಓರ್ವ ದಾಳಿಯಲ್ಲಿ ದಾರುಣವಾಗಿ ಹತನಾಗಿದ್ದಾನೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕರೆತಂದಿದ್ದ ಸ್ಥಳೀಯ ಕಾರು ಚಾಲಕನ ಮೇಲೂ ದಾಳಿ ನಡೆಸಲಾಗಿದೆ.
ಬಾಂಗ್ಲಾ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಇನ್ನೋರ್ವನ ಮೇಲೆ ದಾಳಿ ನಡೆಸಿ ಹತ್ಯೆಗೈಯಲಾಗಿದೆ.
ಹತ್ಯೆಗೀಡಾದವರ ಪೈಕಿ ಓರ್ವ ಉತ್ತರ ಪ್ರದೇಶದ ಜಹೀರ್ ಖಾನ್(35) ಎಂದು ತಿಳಿದು ಬಂದಿದೆ. ಇನೋರ್ವ ದಾಳಿಗೀಡಾದವನ ಸ್ಥಿತಿ ಚಿಂತಾಜನಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ