ಕೋವಿಡ್ ನಕಲಿ ಸರ್ಟಿಫಿಕೇಟ್ : ಎರಡು ಪರೀಕ್ಷಾ ಕೇಂದ್ರಗಳಿಗೆ ಬೀಗ
Team Udayavani, Apr 1, 2021, 7:15 PM IST
ಗಾಂಧಿನಗರ: ಕೋವಿಡ್ ನಕಲಿ ಸರ್ಟಿಫಿಕೇಟ್ ನೀಡುತ್ತಿದ್ದ ಆರೋಪದಡಿ ಸೂರತ್ ನಲ್ಲಿರುವ ಎರಡು ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ಗುಜರಾತ್ ಸರ್ಕಾರ ಬಾಗಿಲು ಮುಚ್ಚಿಸಿದೆ.
ಗುಜರಾತ್ ಉಪಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಆದಂತಹ ನಿತಿನ್ ಪಾಟೀಲ್, ಗುರುವಾರ ವಿಧಾನ ಸಭೆ ಅಧಿವೇಶನದಲ್ಲಿ ಕಪದ್ವಂಜ್ ಕ್ಷೇತ್ರದ ಎಂಎಲ್ಎ ಕಲಾಭಾಯ್ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಈ ವಿಚಾರವನ್ನು ತಿಳಿಸಿದರು.
ಸೂರತ್ ನಲ್ಲಿರುವ ಎರಡು ಪ್ರಯೋಗಾಲಯಗಳು ಕೋವಿಡ್ ವರದಿಯ ನಕಲಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವುದರ ಕುರಿತು ಸಾಕಷ್ಟು ದೂರುಗಳು ಬಂದಿದ್ದವು. ಅಲ್ಲಿರುವ ತೇಜಸ್ ಹಾಗೂ ಹೇಮಜ್ಯೋತಿ ಪ್ರಯೋಗಾಲಯಗಳು ಫೇಕ್ ಸರ್ಟಿಫಿಕೇಟ್ಗಳನ್ನು ನೀಡುತ್ತಿದ್ದವು. ಈ ಕುರಿತು ತನಿಖೆ ನಡೆಸಿದ ವೇಳೆ ಅಸಲಿಯತ್ತು ನಮ್ಮ ಗಮನಕ್ಕೆ ಬಂತು. ಇತ್ತೀಚಿಗಷ್ಟೆ ಈ ಲಾಬ್ಗಳಿಗೆ ಸರ್ಕಾರ ಅನುಮತಿ ನೀಡಿತ್ತು. ಇದೀಗ ಆ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ.
ಇನ್ನು ದೇಶ್ಯಾದ್ಯಂತ ಕೋವಿಡ್ ಎರಡನೇ ಅಲೆ ಆತಂಕ ಎದುರಾಗಿದೆ. ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೆಲವೊಂದು ರಾಜ್ಯಗಳು ಲಾಕ್ಡೌನ್ ಮೊರೆ ಹೋಗಿದ್ದು, ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಂಡಿವೆ. ಹಾಗೂ ಕೋವಿಡ್ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್