ಜನಜಂಗುಳಿ ಪ್ರದೇಶದಲ್ಲಿ ಎರಡು ಗ್ಯಾಂಗ್ ಸ್ಟರ್ ತಂಡಗಳ ಶೂಟೌಟ್; ಇಬ್ಬರು ಬಲಿ
Team Udayavani, May 20, 2019, 10:08 AM IST
ನವದೆಹಲಿ:ಎರಡು ವಿರೋಧಿ ರೌಡಿ ಗ್ಯಾಂಗ್ ಗಳ ನಡುವೆ ನಡೆದ ಶೂಟೌಟ್ ನಲ್ಲಿ ಇಬ್ಬರು ಶಂಕಿತ ಕ್ರಿಮಿನಲ್ ಗಳು ಸಾವನ್ನಪ್ಪಿರುವ ಘಟನೆ ದೆಹಲಿಯ ದ್ವಾರಕಾ ಮೊರ್ ಮೆಟ್ರೋ ಸ್ಟೇಶನ್ ಸಮೀಪ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ, ದರೋಡೆ, ಹಣ ಸುಲಿಗೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದ್ದ ಗ್ಯಾಂಗ್ ಸ್ಟರ್, ನವಾಡಾ ಪ್ರದೇಶದ ನಿವಾಸಿ ಪ್ರವೀಣ್ ಗೆಹ್ಲೋಟ್ ಮತ್ತು ವಿಕಾಸ್ ದಲಾಲ್ ಶೂಟೌಟ್ ನಲ್ಲಿ ಬಲಿಯಾಗಿರುವುದಾಗಿ ವಿವರಿಸಿದ್ದಾರೆ.
ನಿವೇಶನದ ವಿಚಾರದಲ್ಲಿ ಎರಡೂ ಗ್ಯಾಂಗ್ ಗಳ ನಡುವೆ ಶೂಟೌಟ್ ನಡೆಯಲು ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಪ್ಪು ಕಾರಿನಲ್ಲಿದ್ದ ಗ್ಯಾಂಗ್ ನವರು ಬಿಳಿ ಕಾರಿನೊಳಗಿದ್ದವರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಜನನಿಬಿಢ ಪ್ರದೇಶದಲ್ಲಿ ಈ ಶೂಟೌಟ್ ನಡೆದಿದ್ದರಿಂದ ಜನಸಾಮಾನ್ಯರು ಗಾಬರಿ, ಆತಂಕಕ್ಕೊಳಗುವಂತಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪಿಸಿಆರ್ ಮೆಟ್ರೋ ಸ್ಟೇಶನ್ ಸಮೀಪ ಇದ್ದ ಪೊಲೀಸ್ ಅಧಿಕಾರಿಗಳು ಕೂಡಾ ಕ್ರಿಮಿನಲ್ಸ್ ಗಳ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದು, ಒಬ್ಬ ಕ್ರಿಮಿನಲ್ ಸಾವನ್ನಪ್ಪಿರುವುದಾಗಿ ಹೇಳಿದರು. ಶೂಟೌಟ್ ನಲ್ಲಿ ಶಾಮೀಲಾಗಿದ್ದ ಮತ್ತಿಬ್ಬರು ಗ್ಯಾಂಗ್ ಸ್ಟರ್ ಗಳು ಪರಾರಿಯಾಗಿದ್ದಾರೆ. ಅವರನ್ನು ಗುರುತಿಸಲಾಗಿದ್ದು, ಶೀಘ್ರವೇ ಬಂಧಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ