ನಾಗರಿಕರ ಹತ್ಯೆಗೆ ಕಾರಣರಾಗಿದ್ದ ಇಬ್ಬರು ಲಷ್ಕರ್ ಬೆಂಬಲಿತ ಉಗ್ರರ ಬಂಧನ
Team Udayavani, Dec 25, 2021, 1:40 PM IST
ಶ್ರೀನಗರ: ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆ ಬೆಂಬಲಿತ ದಿ ರೆಸಿಸ್ಟೆನ್ಸ್ ಫ್ರಂಟ್ ನ ಇಬ್ಬರು ಉಗ್ರರನ್ನು ಜಮ್ಮು ಕಾಶ್ಮೀರ ಪೊಲೀಸರು ಶ್ರೀನಗರದಲ್ಲಿ ಬಂಧಿಸಿದ್ದಾರೆ.
ಈ ಇಬ್ಬರು ಉಗ್ರರು ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ನಡೆದ ನಾಗರಿಕರು ಮತ್ತು ಪೊಲೀಸರ ಹತ್ಯೆಗೆ ಕಾರಣರಾಗಿದ್ದರು ಎನ್ನಲಾಗಿದೆ. ಈ ಜೋಡಿಯು ಲಷ್ಕರ್-ಎ- ತೋಯ್ಬಾದಿಂದ ಬೆಳೆದ ಹೊಸ ಹೈಬ್ರಿಡ್ ಮಾಡ್ಯೂಲ್ನ ಭಾಗವಾಗಿತ್ತು.
ಇದೇ ಸಮಯದಲ್ಲಿ ಶೋಫಿಯಾನ್ ನಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಶೋಪಿಯಾನದ ಚೌಗಾಮ್ ಪ್ರದೇಶದಲ್ಲಿ ಇಂದು ಬೆಳಗ್ಗಿನ ಜಾವ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿತ್ತು. ನಂತರ ಭದ್ರತಾ ಪಡೆಯ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಬಾಲ್ಯ ವಿವಾಹ ಪ್ರೇರೇಪಿಸುವವರಿಗೆ ಶಿಕ್ಷೆ ಖಚಿತ
ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಚೌಗಾಮ್ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್ ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ