ಕೇರಳಕ್ಕೆ ಯಾವುದೇ ನಿರ್ದಿಷ್ಟ ನೆರವು ಮೊತ್ತ ಪ್ರಕಟಿಸಿಲ್ಲ: ಯುಎಇ
Team Udayavani, Aug 24, 2018, 7:14 PM IST
ಅಬುಧಾಬಿ : ಜಡಿಮಳೆ, ಪ್ರವಾಹ, ಭೂಕುಸಿತವೇ ಮೊದಲಾದ ಭೀಕರ ನೈಸರ್ಗಿಕ ಪ್ರಕೋಪಕ್ಕೆ ನಲುಗಿಹೋಗಿರುವ ಕೇರಳಕ್ಕೆ ”ಯಾವುದೇ ನಿರ್ದಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಅಧಿಕೃತ ಘೋಷಣೆಯನ್ನು ತಾನು ಮಾಡೇ ಇಲ್ಲ” ಎಂದು ಯುಎಇ ಸರಕಾರ ಸ್ಪಷ್ಟಪಡಿಸಿದೆ.
ಯುಎಇ ಆರ್ಥಿಕ ನೆರವು ಸ್ವೀಕರಿಸುವ ವಿಷಯದಲ್ಲಿ ಕೇಂದ್ರ ಮತ್ತು ಕೇರಳ ಸರಕಾರ ನಡುವಿನ ಹಗ್ಗಜಗ್ಗಾಟಕ್ಕೆ ತಾನು ಸಿಲುಕಿಕೊಂಡಿರುವುದನ್ನು ಗಮನಿಸಿರುವ ಯುಎಇ ಸರಕಾರ ಈ ಅಧಿಕೃತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
”ಕೇರಳಕ್ಕೆ ಯಾವುದೇ ನಿರ್ದಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಬಗ್ಗೆ ಯುಎಇ ಈ ತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ” ಎಂದು ಯುಎಇ ರಾಯಭಾರಿ ಅಹ್ಮದ್ ಅಲ್ಬನ್ನಾ ಹೇಳಿರುವುದನ್ನು ಉಲ್ಲೇಖೀಸಿ “ದ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ನಿನ್ನೆ ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು “ಯುಎಇ ಸರಕಾರ ಕೇರಳಕ್ಕೆ 700 ಕೋಟಿ ರೂ. ಹಣಕಾಸು ನೆರವು ನೀಡುವುದಾಗಿ ಹೇಳಿದೆ’ ಎಂದು ತಿಳಿಸಿದ್ದರು.
ಮಾತ್ರವಲ್ಲದೆ ಅಬುಧಾಭಿಯ ಕ್ರೌನ್ ಪ್ರಿನ್ಸ್ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ ಯುಎಇ ನೆರವು ಕೊಡುಗೆಯನ್ನು ತಿಳಿಸಿದ್ದಾರೆ ಎಂದೂ ಪಿಣರಾಯಿ ಹೇಳಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ