ಗಣರಾಜ್ಯೋತ್ಸವಕ್ಕೆ ಯುಎಇ ಕ್ರೌನ್ ಪ್ರಿನ್ಸ್,ಅರಬ್ ಸೈನಿಕರ ಪಥಸಂಚಲನ
Team Udayavani, Jan 10, 2017, 3:09 PM IST
ಹೊಸದಿಲ್ಲಿ : ಈ ಬಾರಿಯ 2017ರ ಗಣರಾಜ್ಯೋತ್ಸವ ದಿನದ ಕಾರ್ಯಕ್ರಮದಲ್ಲಿ ಅಬುಧಾಬಿಯ ಪಟ್ಟಾಭಿಷಿಕ್ತ ರಾಜಕುಮಾರ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಇದೇ ಪ್ರಥಮ ಬಾರಿಗೆ ಅರಬ್ ಸೈನಿಕರು ಗಣರಾಜ್ಯೋತ್ಸವದ ಪರೇಡ್ನಲ್ಲಿ ಪಥಸಂಚಲನ ನಡೆಸಲಿದ್ದಾರೆ.
ರಾಜಕುಮಾರ ಶೇಖ್ ಮೊಹಮ್ಮದ್ ಅವರು ತಮ್ಮೊಂದಿಗೆ ಯುಎಇಯ ರಕ್ಷಣಾ ಪಡೆಯಿಂದ ಮಾರ್ಚಿಂಗ್ ಬ್ಯಾಂಡ್ ತರಲಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.
ಈ ಹಿಂದೆ, 2016ರ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ಅವರು ಮುಖ್ಯ ಅತಿಥಿಗಳಾಗಿ ಬಂದಿದ್ದಾಗ ಅವರ ಜತೆಗೆ ಫ್ರೆಂಚ್ ಮಾರ್ಚಿಂಗ್ ಬ್ಯಾಂಡ್ ಬಂದಿತ್ತು.
ಯುಎಇಯ ಡೆಪ್ಯುಟಿ ಸುಪ್ರೀಂ ಕಮಾಂಡರ್ ಆಗಿರುವ ಅಲ್ ನಹ್ಯಾನ್ ಅವರ ಭೇಟಿಯಿಂದ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಕ್ಕೆ, ವಿಶೇಷವಾಗಿ ವ್ಯಾಪಾರ-ವಾಣಿಜ್ಯ ಮತ್ತು ಭದ್ರತೆಗೆ ಸಂಬಂಧಿಸಿದಂತೆ, ವಿಶೇಷ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ಇದೆ.
ಯುಎಇಯಲ್ಲಿ 26 ಲಕ್ಷಕ್ಕೂ ಅಧಿಕ ಭಾರತೀಯರಿದ್ದಾರೆ. ವರ್ಷಂಪ್ರತಿ ಅವರಿಂದ ಭಾರತಕ್ಕೆ ಸುಮಾರು 14 ಶತಕೋಟಿ ಡಾಲರ್ ರವಾನೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ