ವಿಪಕ್ಷಗಳ ತೀವ್ರ ವಿರೋಧದ ನಡುವೆ UAPA ಮಸೂದೆ ಲೋಕಸಭೆಯಲ್ಲಿ ಅಂಗೀಕಾರ
Team Udayavani, Jul 24, 2019, 6:50 PM IST
ನವದೆಹಲಿ:ಪ್ರತಿಪಕ್ಷಗಳ ವಿರೋಧದ ನಡುವೆಯೂ ಭಯೋತ್ಪಾದನಾ ನಿಗ್ರಹ ಕಾಯ್ದೆಯ ತಿದ್ದುಪಡಿಯನ್ನು ಬಲವಾಗಿ ಸಮರ್ಥಿಸಿಕೊಂಡ ಗೃಹ ಸಚಿವ ಅಮಿತ್ ಶಾ, ನಮ್ಮ ದೇಶದ ಕಾನೂನು ಸಂಸ್ಥೆ ಉಗ್ರರಿಗಿಂತ ಒಂದು ಹೆಜ್ಜೆ ಮುಂದಿರಬೇಕು ಎಂದು ಹೇಳಿದರು.
ಬುಧವಾರ ಲೋಕಸಭೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ(ನಿಯಂತ್ರಣ-ಯುಸಿಪಿಎ) ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಾಗ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದ್ದರು.
ಕಾನೂನು ಬಾಹಿರ ಚಟುವಟಿಕೆ(ನಿಗ್ರಹ) ತಿದ್ದುಪಡಿ ಕಾಯ್ದೆ ಮಸೂದೆ 2019 ಲೋಕಸಭೆಯಲ್ಲಿ ಮಂಡಿಸಿದ್ದು, ಮಸೂದೆ ಪರ 278 ಸದಸ್ಯರು ಹಾಗೂ ವಿರುದ್ಧ 8 ಮಂದಿ ಸಂಸದರು ಮತ ಚಲಾಯಿಸಿದ್ದರು.
ಈ ಕಾಯ್ದೆಯಿಂದ ಉಗ್ರರ ಜತೆ ಸಂಬಂಧ ಹೊಂದಿರುವ ಶಂಕೆಯ ಮೇಲೆ ಕ್ರಮ ಕೈಗೊಳ್ಳಬಹುದಾಗಿದ್ದು, ಭಯೋತ್ಪಾದಕರು ಭಯೋತ್ಪಾದನೆಯಿಂದ ಕೊನೆಗಾಣಿಸಬೇಕೆಂಬುದೇ ಕಾಯ್ದೆಯ ಉದ್ದೇಶವಾಗಿದೆ ಎಂದು ಶಾ ಲೋಕಸಭೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು