UCC Poll: ಸಂಹಿತೆಗೆ ಶೇ.67.2ರಷ್ಟು ಮುಸ್ಲಿಂ ಮಹಿಳೆಯರ ಬೆಂಬಲ

ನ್ಯೂಸ್‌18 ಸುದ್ದಿ ವಾಹಿನಿ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗ

Team Udayavani, Jul 11, 2023, 7:20 AM IST

UCC Poll: ಸಂಹಿತೆಗೆ ಶೇ.67.2ರಷ್ಟು ಮುಸ್ಲಿಂ ಮಹಿಳೆಯರ ಬೆಂಬಲ

ನವದೆಹಲಿ: ದೇಶಾದ್ಯಂತ ನ್ಯೂಸ್‌18 ಸುದ್ದಿ ವಾಹಿನಿ ನಡೆಸಿದ ಸಮೀಕ್ಷೆಯ ಪ್ರಕಾರ, ಶೇ.67.2ರಷ್ಟು ಮುಸ್ಲಿಂ ಮಹಿಳೆಯರು ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಸಮಾನ ನಾಗರಿಕ ಸಂಹಿತೆ(ಯುಸಿಸಿ)ಯನ್ನು ಬೆಂಬಲಿಸಿದ್ದಾರೆ.

ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 8,035 ಮುಸ್ಲಿಂ ಮಹಿಳೆಯರನ್ನು 884 ವರದಿಗಾರರು ಸಂದರ್ಶನ ನಡೆಸಿದ್ದಾರೆ. ಅನಕ್ಷರಸ್ಥರಿಂದ ಹಿಡಿದ ಸ್ನಾತಕೋತ್ತರ ಪದವೀಧಾರರ ವರೆಗೂ ಸಮಾಜದ ವಿವಿಧ ಸ್ತರಗಳ 18ರಿಂದ 65 ವರ್ಷದ ಮುಸ್ಲಿಂ ಮಹಿಳೆಯರು ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.

ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು, ಜೀವನಾಂಶ ಸೇರಿದಂತೆ ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಅನ್ವಯವಾಗುವಂತೆ ಒಂದೇ ಕಾನೂನು ಜಾರಿಯು ಸಮಾನ ನಾಗರಿಕ ಸಂಹಿತೆಯ ಮೂಲ ಉದ್ದೇಶವಾಗಿದೆ. ಆದರೆ ಯುಸಿಸಿ ಜಾರಿಯನ್ನು ಅಖೀಲ ಭಾರತೀಯ ಮುಸ್ಲಿಂ ವೈಯಕ್ತಿಕ ನ್ಯಾಯಮಂಡಳಿ ಬಲವಾಗಿ ಖಂಡಿಸಿದೆ.

ಸಮೀಕ್ಷೆಯಲ್ಲಿ, ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು, ಜೀವನಾಂಶ ಸೇರಿದಂತೆ ವೈಯಕ್ತಿಕ ವಿಚಾರದಲ್ಲಿ ಎಲ್ಲಾ ಭಾರತೀಯರಿಗೆ ಒಂದೇ ಕಾನೂನು ಜಾರಿಗೆ ನೀವು ಬೆಂಬಲಿಸುವಿರಾ ಎಂದು ಕೇಳಲಾದ ಪ್ರಶ್ನೆಗೆ, ಸಮೀಕ್ಷೆಯಲ್ಲಿ ಭಾಗವಹಿಸಿದವರ ಪೈಕಿ, 5403 ಮುಸ್ಲಿಂ ಮಹಿಳೆಯರು(ಶೇ.67.2) ಹೌದು ಎಂದು ಉತ್ತರ ನೀಡಿದ್ದಾರೆ. ಅದೇ ರೀತಿ 2,039 ಮಂದಿ(ಶೇ.25.4) ಇಲ್ಲ ಎಂದು ಹೇಳಿದ್ದಾರೆ. 593 ಮಹಿಳೆಯರು(ಶೇ.7.4) ಗೊತ್ತಿಲ್ಲ ಅಥವಾ ಹೇಳಲು ಆಗುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಮದುವೆಗೆ 21 ವರ್ಷ ಸೂಕ್ತ:
ಇದೇ ವೇಳೆ, ಪುರುಷ ಮತ್ತು ಮಹಿಳೆಯರಿಗೆ ಮದುವೆಗೆ ಕಾನೂನುಬದ್ಧ ವಯಸ್ಸು 21 ವರ್ಷ ಸೂಕ್ತ ಎಂಬುದಕ್ಕೆ ಶೇ.78.7ರಷ್ಟು(6,320) ಮುಸ್ಲಿಂ ಮಹಿಳೆಯರು ಬೆಂಬಲಿಸಿದ್ದಾರೆ. ಶೇ.16.6ರಷ್ಟು(1,337) ಮಂದಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ಉಳಿದ ಶೇ.4.7ರಷ್ಟು(378) ಮಹಿಳೆಯರು ಗೊತ್ತಿಲ್ಲ ಅಥವಾ ಹೇಳಲು ಆಗುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಯುಸಿಸಿಗೆ ಮುಸ್ಲಿಂ ಮಹಿಳೆಯರ ಬೆಂಬಲ
67.2% ಹೌದು
25.4% ಇಲ್ಲ
7.4% ಗೊತ್ತಿಲ್ಲ ಅಥವಾ ಹೇಳಲು ಆಗುವುದಿಲ್ಲ

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.