ಜಿ20 ಶೆರ್ಪಾಗಳ ಸಭೆ ಶುರು: 4 ದಿನ ಹಲವು ವಿಚಾರಗಳ ಬಗ್ಗೆ ಚರ್ಚೆ
Team Udayavani, Dec 5, 2022, 6:35 AM IST
ಉದಯಪುರ: ಜಿ20 ರಾಷ್ಟ್ರಗಳ ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ಭಾರತ ವಹಿಸಿಕೊಂಡ ಬಳಿಕ ಮೊದಲ ಶೆರ್ಪಾಗಳ ಸಭೆ ರಾಜಸ್ಥಾನದ ಉದಯಪುರದಲ್ಲಿ ಭಾನುವಾರ ಶುರುವಾಗಿದೆ.
ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್ ಕಾಂತ್ ನೇತೃತ್ವದಲ್ಲಿ 4 ದಿನಗಳ ಕಾಲ ಹಸಿರು ಅಭಿವೃದ್ಧಿ, ತಾಂತ್ರಿಕ ಕ್ಷೇತ್ರದಲ್ಲಿ ಆಗಿರುವ ಬದಲಾವಣೆಗಳು, ಮಹಿಳೆಯರನ್ನು ಕೇಂದ್ರೀಕರಿಸಿದ ಅಭಿವೃದ್ಧಿ, ಸಹ್ಯ ಅಭಿವೃದ್ಧಿ ಆಧಾರಿತ ಬೆಳವಣಿಗೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲಾಗುತ್ತದೆ. ಮುಂದಿನ ವರ್ಷ ನವದೆಹಲಿಯಲ್ಲಿ ನಡೆಯಲಿರುವ ಜಿ20 ರಾಷ್ಟ್ರಗಳ ಸಭೆಯಲ್ಲಿ ಅಂಗೀಕರಿಸಲಾಗುವ ನಿರ್ಣಯಗಳ ಬಗ್ಗೆಯೂ ಪರಾಮರ್ಶೆ ನಡೆಸಲಾಗುತ್ತದೆ.
ಬಾಂಗ್ಲಾದೇಶ, ಈಜಿಪ್ಟ್, ಮಾರಿಷಿಯಸ್, ನೆದರ್ಲೆಂಡ್, ನೈಜೀರಿಯಾ, ಒಮಾನ್, ಸಿಂಗಾಪುರ, ಸ್ಪೈನ್, ಯುಎಇ ಸರ್ಕಾರಗಳಿಗೆ ನಾಲ್ಕು ದಿನಗಳ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ಸ್ನೇಹಿತನಲ್ಲಿ ನಂಬಿಕೆ ಇದೆ:
ಒಕ್ಕೂಟಕ್ಕೆ ಭಾರತದ ಅಧ್ಯಕ್ಷತೆ ಶುರುವಾಗುತ್ತಲೇ ಟ್ವೀಟ್ ಮಾಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವಲ್ ಮ್ಯಾಕ್ರನ್ “ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ನೆಲೆಯಲ್ಲಿ ಜಿ20 ರಾಷ್ಟ್ರದ ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ಭಾರತ ವಹಿಸಿಕೊಂಡಿದೆ. ಸ್ನೇಹಿತ ನರೇಂದ್ರ ಮೋದಿ ನಮ್ಮೆಲ್ಲರನ್ನೂ ಈ ಧ್ಯೇಯ ವಾಕ್ಯದ ಅಡಿಯಲ್ಲಿ ಒಗ್ಗೂಡಿಸಿ ಶಾಂತಿಯುತ ಹಾಗೂ ಸಹ್ಯ ಅಭಿವೃದ್ಧಿ ಇರುವ ಜಗತ್ತು ನಿರ್ಮಾಣ ಮಾಡುವಲ್ಲಿ ಅತ್ಯುತ್ತಮ ಕೊಡುಗೆ ನೀಡುವರೆಂಬ ನಂಬಿಕೆ ನನಗೆ ಇದೆ’ ಎಂದು ಬರೆದುಕೊಂಡಿದ್ದಾರೆ.
ಇಂದು ಸರ್ವ ಪಕ್ಷ ಸಭೆ:
ಜಿ20 ಶೃಂಗದ ಕುರಿತು ಚರ್ಚಿಸಲೆಂದು ಕೇಂದ್ರ ಸರ್ಕಾರ ಸೋಮವಾರ ಸರ್ವ ಪಕ್ಷಗಳ ಸಭೆ ಕರೆದಿದೆ. ಮುಂದಿನ ಸೆಪ್ಟೆಂಬರ್ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಜಿ20 ರಾಷ್ಟ್ರ ಶೃಂಗ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿ ಅನುಮೋದನೆ ಪಡೆಯುವ ಬಗ್ಗೆ ಚರ್ಚಿಸಲಾಗುತ್ತದೆ. 40 ರಾಜಕೀಯ ಪಕ್ಷಗಳ ಅಧ್ಯಕ್ಷರಿಗೆ ಈಗಾಗಲೇ ಸಭೆಯ ಆಹ್ವಾನ ಕಳುಹಿಸಿಕೊಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ