ರಾಜ್ಯದ ಬಿಲ್ಡರ್ಸ್ ಸಮಸ್ಯೆ ಬಗೆಹರಿಸಲು ಸರಕಾರ ಸಿದ್ದ: ಉದ್ಧವ್‌ ಠಾಕ್ರೆ


Team Udayavani, Feb 11, 2020, 5:05 PM IST

Uddav-Thackeray

ಮುಂಬಯಿ: ರಾಜ್ಯದ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರಕಾರ ಸಿದ್ಧವಾಗಿದೆ. ಆದರೆ ಬಿಲ್ಡರ್ಸ್ ಕೂಡ ತಮಗಾಗಿ ರೂಪಿಸಲಾಗಿರುವ ಕಾನೂನುಗಳನ್ನುಯನ್ನು ಪಾಲಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಸಹ್ಯಾದ್ರಿ ಅತಿಥಿಗೃಹದಲ್ಲಿ ಕ್ರೆಡಾಯಿ -ನರೆಡ್ಕೊ ಸಂಘಟನೆಯೊಂದಿಗೆ ಸಭೆ ಆಯೋಜಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಮಾತನಾಡಿ, ರಾಜ್ಯದ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕರ ಸಮಸ್ಯೆಗಳನ್ನು ಪರಿಹರಿಸಲು ತ್ವರಿತ ಪ್ರತಿಕ್ರಿಯೆ ವಿಂಡೋವನ್ನು ಸ್ಥಾಪಿಸಲಾಗುವುದು ಮತ್ತು ಅದರ ಅಡಿಯಲ್ಲಿ ಸ್ಟೀರಿಂಗ್‌ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದರು.

ಈ ಸ್ಟೀರಿಂಗ್‌ ಸಮಿತಿಯಲ್ಲಿ ಗೃಹ ಸಚಿವ ಜಿತೇಂದ್ರ ಅವಾಡ್‌, ನಗರಾಭಿವೃದ್ಧಿ ಸಚಿವ ಏಕನಾಥ್‌ ಶಿಂಧೆ, ಸಾರಿಗೆ ಸಚಿವ ಅನಿಲ್‌ ಪರಬ್‌, ನೆರೆಡ್ಕೋ ಸಂಸ್ಥೆಯ ಅಧ್ಯಕ್ಷ ನಿರಂಜನ್‌ ಹಿರಾನಂದಾನಿ, ರಾಜನ್‌ ಬಾಂದಲೇಕರ್‌, ನಯನ್‌ ಶಾ, ಶಾಹಿದ್‌ ಬಲ್ವಾ, ಬೌಮನ್‌ ಇರಾನಿ, ಅಜಯ್‌ ಆಶರ್‌ , ವಿನೋದ್‌ ಗೋಯೆಂಕಾ, ಡೊಮಿನಿಕ್‌ ರೊಮೆಲ್‌ ಮತ್ತು ದಿಲೀಪ್‌ ಠಕ್ಕರ್‌ ಸೇರಿದ್ದಾರೆ.

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಾತನಾಡಿ, ವಸತಿ ವಲಯವು ಇಂದು ಅನೇಕ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಹೇಳಿದರು. ಸರಕಾರ ಮತ್ತು ಅಭಿವರ್ಧಕರು ತಂಡವಾಗಿ ಕೆಲಸ ಮಾಡಿದರೆ ಮಾತ್ರ ನಾವು ಈ ಸಮಸ್ಯೆಗಳನ್ನು ನಿವಾರಿಸಬಹುದು. ರೋಟಿ, ಬಟ್ಟೆ ಮತ್ತು ಮನೆ ಒದಗಿಸುವುದು ಇದು ಸರಕಾರದ ಜವಾಬ್ದಾರಿಯಾಗಿದೆ.

ಹಾಗೆಯೇ ಕೊಳೆಗೇರಿ ನಿವಾಸಿಗಳಿಗೆ ತಮ್ಮ ಹಕ್ಕಿನ ಮನೆ ನೀಡಲು ಸರಕಾರ ಪ್ರಯತ್ನಿಸುತ್ತಿದೆ. ಕೊಳೆಗೇರಿ ಪುನರ್ವಸತಿ ಯೋಜನೆಯು ಯಾವ ಕಾರಣದಿಂದ ಮಂದಗತಿ ಕಂಡಿತು, ಇದನ್ನು ಹೇಗೆ ಬಗೆಹರಿಸಲಾಗುವುದು , ಆ ನಿಟ್ಟಿನಲ್ಲಿ ನೀತಿಯನ್ನು ಅಳವಡಿಸಬೇಕೆಂದು ಸಿಎಂ ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಈ ವೇಳೆ ನಗರ ಅಭಿವೃದ್ಧಿ ಸಚಿವ ಏಕನಾಥ್‌ ಶಿಂಧೆ ಮಾತನಾಡಿ, ಈ ವಸತಿ ಕ್ಷೇತ್ರದ ಸ್ಥಿತಿಯನ್ನು ಸುಧಾರಿಸಲು ಸರಕಾರ ಪ್ರಯತ್ನಿಸುತ್ತಿದೆ. ಹಾಗೆಯೇ ಅಭಿವರ್ಧಕರ ಬೇಡಿಕೆಗಳ ಬಗ್ಗೆ ಸರಕಾರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಿದೆ. ಆದ್ದರಿಂದ ಅಭಿವರ್ಧಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ಸರಕಾರ ಅದಕ್ಕೆ ಅಧಿಕ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.

ಈ ವೇಳೆ ವಸತಿ ಸಚಿವ ಜಿತೇಂದ್ರ ಅವಾಡ್‌ ಮಾತನಾಡಿ, ವಸತಿ ವಲಯದಲ್ಲಿ ಕೊಳೆಗೇರಿಗಳನ್ನು ತೆಗೆದುಹಾಕಲು ಕಳೆದ ತಿಂಗಳು ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಹಾಗೆಯೇ ಕೊಳೆಗೇರಿ ಪುನರ್ವಸತಿಗಾಗಿ ಹಲವಾರು ಯೋಜನೆಗಳು ಈಗ ನಡೆಯುತ್ತಿವೆ.

ಬಡವರಿಗೆ ಕೈಗೆಟುಕುವ ವಸತಿ ಒದಗಿಸಲು ಸರಕಾರ ಬದ್ಧವಾಗಿದೆ. ನಾಲ್ಕನೇ ಶ್ರೇಣಿಯ ಸರಕಾರಿ ನೌಕರರಿಗೆ ಮತ್ತು ಪೊಲೀಸರಿಗೆ ಶೇ.10 ರಷ್ಟು ಮನೆಗಳನ್ನು ಕಾಯ್ದಿರಿಸಲು ಸರಕಾರ ನಿರ್ಧರಿಸಿದೆ. ವಸತಿ ಕ್ಷೇತ್ರದ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ಬ್ಯಾಂಕ್‌ಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಲಾಗಿದೆ ಎಂದರು.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.