CBI ತನಿಖೆಗಿದ್ದ ‘ಸಾಮಾನ್ಯ ಒಪ್ಪಿಗೆ’ಯನ್ನು ಹಿಂಪಡೆದ ಠಾಕ್ರೆ ಸರ್ಕಾರ: ಏನಿದು ಬೆಳವಣಿಗೆ ?
Team Udayavani, Oct 22, 2020, 7:49 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಅಪರಾಧ ಪ್ರಕರಣಗಳ ತನಿಖೆಗಾಗಿ ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ನೀಡಿದ ಸಾಮಾನ್ಯ ಒಪ್ಪಿಗೆಯನ್ನು ಉದ್ಧವ್ ಠಾಕ್ರೆ ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ. ಹೀಗಾಗಿ ಇನ್ನು ಮುಂದೆ ಸಿಬಿಐ ಯಾವುದೇ ತನಿಖೆ ನಡೆಸಬೇಕಾದರೂ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ.
ಈಗಾಗಲೇ ಬಿಜೆಪಿ ಅಧಿಕಾರದಲ್ಲಿಲ್ಲದ ಮೂರು ರಾಜ್ಯಗಳಾದ ರಾಜಸ್ಥಾನ, ಛತ್ತಿಸ್ ಗಡ ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಬಿಐಗೆ ಪ್ರಕರಣಗಳನ್ನು ತನಿಖೆ ನಡೆಸಲು ಅವಕಾಶ ನೀಡುವ ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆಯಲಾಗಿದೆ.
ಆದರೇ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಸಿಬಿಐ ತನಿಖೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿದು ಬಂದಿದೆ. ಈ ತನಿಖೆ ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ನಡೆಯುತ್ತಿದ್ದು, ರಾಜ್ಯವು ತನ್ನ ಒಪ್ಪಿಗೆಯನ್ನು ನೀಡುವ ಅಗತ್ಯವಿರುವ ನಿಬಂಧನೆಗಳ ಅಡಿಯಲ್ಲಿ ಅಲ್ಲ ಎಂದು ವರದಿಯಾಗಿದೆ.
ಇದನ್ನೂ ಓದಿ: ಉದಯವಾಣಿ ಸಂದರ್ಶನ: ಶಕ್ತಿ ತುಂಬಿದವರ ಕತ್ತು ಕೊಯ್ಯುವುದು ಕಾಂಗ್ರೆಸ್ ಚಾಳಿ!
ಲಖನೌದ ಹಜರತ್ಗಂಜ್ ಪೊಲೀಸ್ ಠಾಣೆಯಲ್ಲಿ ಜಾಹೀರಾತು ಏಜೆನ್ಸಿಯೊಂದು ಟಿಆರ್ಪಿ ಹಗರಣದ ಕುರಿತು ದೂರು ದಾಖಲಿಸಿದ ನಂತರ ಉತ್ತರ ಪ್ರದೇಶ ಪೊಲೀಸರು ಶಿಫಾರಸ್ಸಿನ ಹಿನ್ನಲೆಯಲ್ಲಿ ಸಿಬಿಐ ತಂಡ ಪ್ರಕರಣದ ತನಿಖೆಗಿಳಿದಿತ್ತು. ಇದರ ಬೆನ್ನಲ್ಲೇ ಸರ್ಕಾರದ ಈ ನಿರ್ಧಾರ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ