ಬನ್ನಿ, ನಾವೆಲ್ಲರೂ ಚುನಾವಣೆ ಎದುರಿಸೋಣ: ಶಿಂಧೆ ಬಣ, ಬಿಜೆಪಿಗೆ ಉದ್ಧವ್‌ ಠಾಕ್ರೆ ಸವಾಲು


Team Udayavani, May 13, 2023, 7:30 AM IST

ಬನ್ನಿ, ನಾವೆಲ್ಲರೂ ಚುನಾವಣೆ ಎದುರಿಸೋಣ: ಶಿಂಧೆ ಬಣ, ಬಿಜೆಪಿಗೆ ಉದ್ಧವ್‌ ಠಾಕ್ರೆ ಸವಾಲು

ಮುಂಬಯಿ: “ಬನ್ನಿ, ನಾವೆಲ್ಲರೂ ಸೇರಿ ಮಹಾರಾಷ್ಟ್ರದಲ್ಲಿ ಜತೆಯಾಗಿ ವಿಧಾನಸಭೆ ಚುನಾವಣೆ ಎದುರಿಸೋಣ’- ಹೀಗೆಂದು ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿಗೆ ಮತ್ತು ಸಿಎಂ ಏಕನಾಥ ಶಿಂಧೆ ಬಣದ ಶಾಸಕರಿಗೆ ಸವಾಲು ಹಾಕಿದ್ದಾರೆ.

ಮುಂಬಯಿಯಲ್ಲಿ ಶುಕ್ರವಾರ ಮಾತ ನಾಡಿದ ಅವರು, “ವಿಶ್ವಾಸಮತವನ್ನು ಎದುರಿಸದೆ ರಾಜೀನಾಮೆ ನೀಡಿದ್ದೇನೆ. ಅದೇ ರೀತಿ ಮುಖ್ಯಮಂತ್ರಿ ಏಕನಾಥ ಶಿಂಧೆ ಸರಕಾರ ವನ್ನು ವಿಸರ್ಜಿಸಿ ಚುನಾವಣೆ ಘೋಷಣೆ ಮಾಡಲಿ. ನಾವೆ ಲ್ಲರೂ ಒಟ್ಟಾಗಿ ಜನರ ಮುಂ ದೆ ನಿಂತು ಹೊಸತಾಗಿ ಜನಾ ದೇಶ ಪಡೆದು ಕೊಳ್ಳೋಣ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಏಕನಾಥ ಶಿಂಧೆ ಸಹಿತ 16 ಶಾಸಕರನ್ನು ಅನರ್ಹಗೊಳಿ ಸುವ ಬಗ್ಗೆ ವಿಧಾನಸಭೆಯ ಸ್ಪೀಕರ್‌ ಅತ್ಯಂತ ತ್ವರಿತವಾಗಿ ನಿರ್ಧಾರ ಕೈಗೊ ಳ್ಳಬೇಕು. ವಿಳಂಬ ಮಾಡಿದರೆ ಅವರ ವಿರುದ್ಧ ಮತ್ತೂಮ್ಮೆ ಸುಪ್ರೀಂಕೋರ್ಟ್‌ ನಲ್ಲಿ ದಾವೆ ಹೂಡುತ್ತೇವೆ. ಸದ್ಯ 16 ಮಂದಿ ಶಾಸಕರಿಗೆ ನೀಡಲಾಗಿರುವ ಜೀವದಾನ ಕೇವಲ ತಾತ್ಕಾಲಿಕ ಎಂದಿ ದ್ದಾರೆ. ವಿಶ್ವಾಸಮತಕ್ಕೆ ಮೊದಲೇ ಉದ್ಧ ವ್‌ ಠಾಕ್ರೆ ನೇತೃತ್ವದ ಸರಕಾರ ರಾಜೀ ನಾಮೆ ನೀಡಿದ್ದರಿಂದ ಅದನ್ನು ಪುನಃಸ್ಥಾಪಿಸಲು ಸಾಧ್ಯವಾಗದು ಎಂದ ಸುಪ್ರೀಂಕೋರ್ಟ್‌ ಕೋರ್ಟ್‌ ತೀರ್ಮಾ ನಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಪಾಲರು ನಡೆದುಕೊಂಡು ರೀತಿ ಯಿಂದಾಗಿ ಹೀಗಾಗಿದೆ ಎಂದರು. ಸದ್ಯ ಅಧಿಕಾರದಲ್ಲಿ ಇರುವ ಸರಕಾರ ಅನೈ ತಿಕವಾದದ್ದು ಎಂದು ಟೀಕಿಸಿದರು.

ಒತ್ತಡ ಸಲ್ಲದು: ಶಾಸಕರನ್ನು ಅನರ್ಹತೆಗೊಳಿಸುವ ವಿಚಾ ರದಲ್ಲಿ ಸ್ಪೀಕರ್‌ ಮೇಲೆ ಒತ್ತಡ ಹೇರುವುದು ಸಲ್ಲದು. ಅದು ನಮ್ಮ ಮುಕ್ತ ಮತ್ತು ನ್ಯಾಯ ಸಮ್ಮತವಾಗಿರುವ ಕಾನೂನು ವ್ಯವಸ್ಥೆಯಲ್ಲಿ ಇಲ್ಲವೆಂದು ನಾಗಪುರದಲ್ಲಿ ಮಾತನಾಡಿದ ಡಿಸಿಎಂ ದೇವೇಂದ್ರ ಫ‌ಡ್ನವೀಸ್‌ ಹೇಳಿದ್ದಾರೆ. ಸ್ಪೀಕರ್‌ ರಾಹುಲ್‌ ನರ್ವೇಕರ್‌ ಸೂಕ್ತ ಸಂದರ್ಭದಲ್ಲಿ ಅನರ್ಹತೆಯ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಕ್ರಮ ಕೈಗೊಳ್ಳಬಹುದಿತ್ತು: ಸ್ಪೀಕರ್‌ ಆಗಿದ್ದ ನಾನಾ ಪಟೋಲೆ ರಾಜೀನಾಮೆ ಬಳಿಕ ಉದ್ಧವ್‌ ವಿರುದ್ಧ ಬಂಡಾಯವೆದ್ದ 16 ಶಾಸಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುತ್ತಿದ್ದರೆ ಅವರನ್ನು ಅನರ್ಹ ಗೊಳಿಸಹುದಿತ್ತು ಎಂದು ಎನ್‌ಸಿಪಿ ಮುಖಂಡ ಅಜಿತ್‌ ಪವಾರ್‌ ಹೇಳಿ ದ್ದಾರೆ. ಸಿಎಂ ಆಗಿದ್ದ ಉದ್ಧವ್‌ ಠಾಕ್ರೆ ಜತೆಗೆ ಚರ್ಚೆ ನಡೆಸದೆ ಪಟೋಲೆ ರಾಜೀ ನಾಮೆ ನೀಡಿದ್ದರು. ಅವರು ಇರುತ್ತಿದ್ದರೆ, ಪರಿಸ್ಥಿತಿ ನಿಭಾಯಿಸ ಬಹುದಾಗಿತ್ತು ಎಂದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.